‘ಪರೀಕ್ಷೆಯ ಬಗೆಗಿನ ಗೊಂದಲ ವಿದ್ಯಾರ್ಥಿಗಳ ಮನಸ್ಸಿನ ಮೇಲೆ ಒತ್ತಡ ಹೇರುತ್ತದೆ. ಜೊತೆಗೆ, ಕೋವಿಡ್ ಸಾಂಕ್ರಾಮಿಕ ಇದೀಗ ಗ್ರಾಮಗಳಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಸಾವಿನ ಸಂಖ್ಯೆ ಸಹ ಹೆಚ್ಚುತ್ತಲೇ ಇದೆ. ಮುಂದಿನ ದಿನಗಳಲ್ಲಿ ಸರ್ಕಾರ ಪರೀಕ್ಷೆ ನಡೆಸಲು ನಿರ್ಧರಿಸಿದರೂ ಕೆಲವು ದಿನಗಳು ತರಗತಿ ನಡೆಸಿಯೇ ಪರೀಕ್ಷೆ ನಡೆಸಬೇಕು. ಆದರೆ ಮುಂದೆ ಮೂರನೇ ಅಲೆಯ ಅಪಾಯವನ್ನು ಗಮನದಲ್ಲಿ ಇಟ್ಟುಕೊಂಡು, ತರಗತಿ ಅಥವಾ ಪರೀಕ್ಷೆ ನಡೆಸುವುದು ಕಷ್ಟಸಾಧ್ಯ. ಅನುಭವಿ ಶಿಕ್ಷಕರು ಹಾಗೂ ಶಿಕ್ಷಣ ತಜ್ಞರ ಸಲಹೆ ಮೇರೆಗೆ ಒಂದು ವೈಜ್ಞಾನಿಕ ಮೌಲ್ಯಮಾಪನ ಪದ್ಧತಿ ರಚಿಸಿ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಸಂಘಟನೆಯ ಜಿಲ್ಲಾ ಅಧ್ಯಕ್ಷ ಹಣಮಂತ ಎಚ್.ಎಸ್, ಕಾರ್ಯದರ್ಶಿ ಈರಣ್ಣ ಇಸಬಾ, ಉಪಾಧ್ಯಕ್ಷೆ ಸ್ನೇಹಾ ಕಟ್ಟಿಮನಿ ಒತ್ತಾಯಿಸಿದರು.