ಪ್ರತಿ ವರ್ಷವೂ ಮಳೆ ಕಡಿಮೆ ಆಗುತ್ತಿರುವುದರಿಂದ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಇದರ ಪರಿಣಾಮ ರೈತರು ಹೆಚ್ಚು ನೀರು ಬೇಕಾಗುವ ಬಾಳೆ, ಕಬ್ಬು ಬೆಳೆಯುವುದು ಬಿಟ್ಟಿದ್ದಾರೆ. ಕಡಿಮೆ ಅವಧಿಯಲ್ಲಿ ಕಡಿಮೆ ಖರ್ಚಿನಲ್ಲಿ ಕಡಿಮೆ ನೀರು ಬೇಕಾಗುವ ಬೆಳೆಗಳನ್ನೇ ಹೆಚ್ಚಾಗಿ ಬೆಳೆಯುತ್ತಿದ್ದಾರೆ. ಆದರೆ, ಬಸವರಾಜ ರೋಡಗಿ ಒಂದೂವರೆ ಎಕರೆಯಲ್ಲಿ ಚೆಂಡು ಹೂವು ಬೆಳೆದು ಬಾಳೆ ಮತ್ತು ಕಬ್ಬಿನ ಬೆಳೆಗೆ ಬರುವ ಅದಕ್ಕಿಂತಲೂ ಹೆಚ್ಚಿನ ಆದಾಯ ಪಡೆದಿದ್ದಾರೆ.