ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಕೆಲವು ಗೂಂಡಾಗಳು ರಾಷ್ಟ್ರೀಯ ರೈತ ನಾಯಕ ರಾಕೇಶ್ ಟಿಕಾಯತ್ ಹಾಗೂ ಅವರ ಸಂಗಡಿಗರ ಮೇಲೆ ನಡೆಸಿದ ಕ್ರೂರ ದಾಳಿ ಮಾಡಿದವರು ಬಿಜೆಪಿ ಪಕ್ಷಕ್ಕೆ ಸೇರಿದ್ದಾರೆ. ದಾಳಿ ನಡೆಯುವ ಸಮಯದಲ್ಲಿ ಅವರು ಮೋದಿ, ಮೋದಿ ಎಂದು ಘೋಷಣೆಗಳನ್ನು ಕೂಗಿದ್ದಾರೆ. ಆದ್ದರಿಂದ ದಾಳಿ ನಡೆಸಿದ ಗೂಂಡಾಗಳ ಕೃತ್ಯದ ಬಗ್ಗೆ ಸರ್ಕಾರವು ನಿಷ್ಪಕ್ಷಪಾತ ತನಿಖೆ ನಡೆಸಿ, ದಾಳಿಯ ಹಿಂದಿನ ಉದ್ದೇಶವನ್ನು ಪತ್ತೆ ಮಾಡಿ, ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.