ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಹಾನಗರ ಪಾಲಿಕೆಯ ಅವಧಿ ಎರಡು ವರ್ಷಗಳ ಹಿಂದೆಯೇ ಮುಗಿದಿದ್ದರೂ ಆಗ ಚುನಾವಣೆ ರಾಜಕೀಯ ಕಾರಣಗಳಿಂದಾಗಿ ವಿಳಂಬವಾದಾಗ ಸುಮ್ಮನಿದ್ದ ಚುನಾವಣಾ ಆಯೋಗ ಈಗ ಕೊರೊನಾ ಉಲ್ಬಣಗೊಳ್ಳುತ್ತಿದ್ದರೂ ಹಟಕ್ಕೆ ಬಿದ್ದವರಂತೆ ಚುನಾವಣೆ ನಡೆಸುವುದನ್ನು ನೋಡಿದರೆ ಆಯೋಗಕ್ಕೆ ಜನರ ಜೀವಕ್ಕಿಂತ ಚುನಾವಣೆ ನಡೆಸುವುದೇ ಆದ್ಯತೆಯಾದಂತಾಗಿದೆ ಎಂದು ಟೀಕಿಸಿದ್ದಾರೆ.