<p><strong>ಕಲಬುರಗಿ:</strong> ‘ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರನ್ನು ಗುಜರಾತ್ ಭಯೋತ್ಪಾದನೆ ನಿಗ್ರಹ ದಳವು (ಎಟಿಎಸ್) ವಶಕ್ಕೆ ಪಡೆದುಕೊಂಡಿರುವುದು ಖಂಡನೀಯ’ ಎಂದು ಸೋಷಲಿಸ್ಟ್ ಯುನಿಟಿ ಸೆಂಟರ್ ಆಪ್ ಇಂಡಿಯಾ (ಎಸ್ಯುಸಿಐ) ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಎಚ್.ವಿ.ದಿವಾಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ಗುಜರಾತಿನಲ್ಲಿ ಈ ಹಿಂದೆ ನಡೆದ ಗಲಭೆ ಪ್ರಕರಣಗಳಲ್ಲಿ ನರೇಂದ್ರ ಮೋದಿ ಅವರು ನಿರಾಪರಾಧಿ ಎಂದು ನ್ಯಾಯಾಲಯ ಅವರನ್ನು ಖುಲಾಸೆ ಮಾಡಿದೆಯಾದರೂ, ದೇಶದ ಜನರ ಆತ್ಮಸಾಕ್ಷಿ ನ್ಯಾಯಾಲಯದಲ್ಲಿ ಮೋದಿಯವರು ಎಂದಿಗೂ ಅಪರಾಧಿ ಸ್ಥಾನದಲ್ಲಿಯೇ ಉಳಿಯಲಿದ್ದಾರೆ‘ ಎಂದಿದ್ದಾರೆ.</p>.<p>‘ಸೇಡಿನ ಕ್ರಮವಾಗಿ ಗುಜರಾತ್ ಬಿಜೆಪಿ ಸರ್ಕಾರವು ಮಾನವ ಹಕ್ಕುಗಳ ಹೋರಾಟಗಾರರಾದ ತೀಸ್ತಾ ಸೆಟಲ್ವಾಡ್ ಮತ್ತಿತರನ್ನು ಅಕ್ರಮವಾಗಿ ಬಂಧಿಸಿರುವುದು ಸರಿಯಲ್ಲ. ಕೂಡಲೇ ಅವರನ್ನು ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ‘ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರನ್ನು ಗುಜರಾತ್ ಭಯೋತ್ಪಾದನೆ ನಿಗ್ರಹ ದಳವು (ಎಟಿಎಸ್) ವಶಕ್ಕೆ ಪಡೆದುಕೊಂಡಿರುವುದು ಖಂಡನೀಯ’ ಎಂದು ಸೋಷಲಿಸ್ಟ್ ಯುನಿಟಿ ಸೆಂಟರ್ ಆಪ್ ಇಂಡಿಯಾ (ಎಸ್ಯುಸಿಐ) ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಎಚ್.ವಿ.ದಿವಾಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ಗುಜರಾತಿನಲ್ಲಿ ಈ ಹಿಂದೆ ನಡೆದ ಗಲಭೆ ಪ್ರಕರಣಗಳಲ್ಲಿ ನರೇಂದ್ರ ಮೋದಿ ಅವರು ನಿರಾಪರಾಧಿ ಎಂದು ನ್ಯಾಯಾಲಯ ಅವರನ್ನು ಖುಲಾಸೆ ಮಾಡಿದೆಯಾದರೂ, ದೇಶದ ಜನರ ಆತ್ಮಸಾಕ್ಷಿ ನ್ಯಾಯಾಲಯದಲ್ಲಿ ಮೋದಿಯವರು ಎಂದಿಗೂ ಅಪರಾಧಿ ಸ್ಥಾನದಲ್ಲಿಯೇ ಉಳಿಯಲಿದ್ದಾರೆ‘ ಎಂದಿದ್ದಾರೆ.</p>.<p>‘ಸೇಡಿನ ಕ್ರಮವಾಗಿ ಗುಜರಾತ್ ಬಿಜೆಪಿ ಸರ್ಕಾರವು ಮಾನವ ಹಕ್ಕುಗಳ ಹೋರಾಟಗಾರರಾದ ತೀಸ್ತಾ ಸೆಟಲ್ವಾಡ್ ಮತ್ತಿತರನ್ನು ಅಕ್ರಮವಾಗಿ ಬಂಧಿಸಿರುವುದು ಸರಿಯಲ್ಲ. ಕೂಡಲೇ ಅವರನ್ನು ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>