<p><strong>ಕಲಬುರಗಿ</strong>: ನಗರದ ವಿವಿಧೆಡೆಯ 13 ನ್ಯಾಯಬೆಲೆ ಅಂಗಡಿಗಳ ಮೇಲೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ಭೀಮರಾಯ ಕಲ್ಲೂರು ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.</p>.<p>ಮಿಲತ್ ನಗರ, ಗಂಜ್ ಪ್ರದೇಶ, ಆಳಂದ ಚೆಕ್ಪೋಸ್ಟ್ ಪ್ರದೇಶದ ಸೇರಿದಂತೆ ವಿವಿಧೆಡೆಯ ನ್ಯಾಯಬೆಲೆ ಅಂಗಡಿಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿದರು. ಪಡಿತರ ಆಹಾರ ಧಾನ್ಯ ವಿತರಣೆಯ ಕುರಿತು ಪರಿಶೀಲಿಸಿದರು. </p>.<p>‘ಸರ್ಕಾರ ನಿಗದಿಪಡಿಸಿದ ಪ್ರಮಾಣದಂತೆ ಪಡಿತರ ಚೀಟಿದಾರರಿಗೆ ಗುಣಮಟ್ಟದ ಆಹಾರ ಧಾನ ವಿತರಿಸಬೇಕು. ಬೆಳಿಗ್ಗೆ 8ರಿಂದ ಮಧ್ಯಾಹ್ನ 12 ಗಂಟೆವರೆಗೂ ಮತ್ತು ಸಂಜೆ 4ರಿಂದ ರಾತ್ರಿ 8 ಗಂಟೆವರೆಗೂ ತಪ್ಪದೆ ಆಹಾರ ಧಾನ್ಯ ವಿತರಣೆ ಮಾಡಬೇಕು. ಪಡಿತರ ವಿತರಿಸುವ ಪ್ರಮಾಣದ ಬಗ್ಗೆ ಫಲಾನುಭವಿಗಳಿಗೆ ಕಾಣುವಂತೆ ನ್ಯಾಯಬೆಲೆ ಅಂಗಡಿಯಲ್ಲಿ ಫಲಕಗಳನ್ನು ಪ್ರದರ್ಶಿಸಬೇಕು. ಅಂಗಡಿಯಲ್ಲಿ ಸ್ವಚ್ಛತೆ ಕಾಪಾಡಬೇಕು’ ಎಂದು ಸೂಚಿಸಿದರು.</p>.<p>‘ಭೇಟಿ ವೇಳೆ ಆಹಾರ ಧಾನ್ಯ ವಿತರಣೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಭಿಪ್ರಾಯ ಪಡೆಯಲಾಯಿತು. ಈ ವೇಳೆ ಕೆಲವೆಡೆ ಪಡಿತರದೊಂದಿಗೆ ಸಾಬೂನು ಮತ್ತಿತರ ವಸ್ತುಗಳ ವಿತರಣೆ ಬಗೆಗೆ ಸಾರ್ವಜನಿಕರು ದೂರಿದ್ದಾರೆ’ ಎಂದು ಭೀಮರಾಯ ಕಲ್ಲೂರು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ನಗರದ ವಿವಿಧೆಡೆಯ 13 ನ್ಯಾಯಬೆಲೆ ಅಂಗಡಿಗಳ ಮೇಲೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ಭೀಮರಾಯ ಕಲ್ಲೂರು ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.</p>.<p>ಮಿಲತ್ ನಗರ, ಗಂಜ್ ಪ್ರದೇಶ, ಆಳಂದ ಚೆಕ್ಪೋಸ್ಟ್ ಪ್ರದೇಶದ ಸೇರಿದಂತೆ ವಿವಿಧೆಡೆಯ ನ್ಯಾಯಬೆಲೆ ಅಂಗಡಿಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿದರು. ಪಡಿತರ ಆಹಾರ ಧಾನ್ಯ ವಿತರಣೆಯ ಕುರಿತು ಪರಿಶೀಲಿಸಿದರು. </p>.<p>‘ಸರ್ಕಾರ ನಿಗದಿಪಡಿಸಿದ ಪ್ರಮಾಣದಂತೆ ಪಡಿತರ ಚೀಟಿದಾರರಿಗೆ ಗುಣಮಟ್ಟದ ಆಹಾರ ಧಾನ ವಿತರಿಸಬೇಕು. ಬೆಳಿಗ್ಗೆ 8ರಿಂದ ಮಧ್ಯಾಹ್ನ 12 ಗಂಟೆವರೆಗೂ ಮತ್ತು ಸಂಜೆ 4ರಿಂದ ರಾತ್ರಿ 8 ಗಂಟೆವರೆಗೂ ತಪ್ಪದೆ ಆಹಾರ ಧಾನ್ಯ ವಿತರಣೆ ಮಾಡಬೇಕು. ಪಡಿತರ ವಿತರಿಸುವ ಪ್ರಮಾಣದ ಬಗ್ಗೆ ಫಲಾನುಭವಿಗಳಿಗೆ ಕಾಣುವಂತೆ ನ್ಯಾಯಬೆಲೆ ಅಂಗಡಿಯಲ್ಲಿ ಫಲಕಗಳನ್ನು ಪ್ರದರ್ಶಿಸಬೇಕು. ಅಂಗಡಿಯಲ್ಲಿ ಸ್ವಚ್ಛತೆ ಕಾಪಾಡಬೇಕು’ ಎಂದು ಸೂಚಿಸಿದರು.</p>.<p>‘ಭೇಟಿ ವೇಳೆ ಆಹಾರ ಧಾನ್ಯ ವಿತರಣೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಭಿಪ್ರಾಯ ಪಡೆಯಲಾಯಿತು. ಈ ವೇಳೆ ಕೆಲವೆಡೆ ಪಡಿತರದೊಂದಿಗೆ ಸಾಬೂನು ಮತ್ತಿತರ ವಸ್ತುಗಳ ವಿತರಣೆ ಬಗೆಗೆ ಸಾರ್ವಜನಿಕರು ದೂರಿದ್ದಾರೆ’ ಎಂದು ಭೀಮರಾಯ ಕಲ್ಲೂರು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>