<p><strong>ಕಲಬುರಗಿ:</strong> ‘ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ‘ನಾಲಾಯಕ್’ ಪದ ಬಳಸಿ ಟೀಕಿಸಿದ್ದು ಖಂಡನೀಯ. ಈ ಮೂಲಕ ತಮ್ಮನ್ನು ತಾವೇ ಯೋಗ್ಯತೆ ಮತ್ತು ನಾಗರಿಕತೆ ಇಲ್ಲದ ವ್ಯಕ್ತಿ ಎಂದು ನಿರೂಪಿಸಿಕೊಂಡಿದ್ದಾರೆ’ ಎಂದು ಬಿಜೆಪಿ ರಾಜ್ಯ ವಕ್ತಾರೆ ಸುಧಾ ಹಾಲಕೈ ಹೇಳಿದರು.</p>.<p>ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವ್ಯಕ್ತಿತ್ವವೇ ಇಲ್ಲದಂತಹ ಪ್ರಿಯಾಂಕ್ ಖರ್ಗೆ ನಿಜವಾದ ಅರ್ಥದಲ್ಲಿ ಕರ್ನಾಟಕದ ನಾಲಾಯಕ್ ಮಂತ್ರಿ. ತಮ್ಮ ಐಟಿ–ಬಿಟಿ, ಗ್ರಾಮೀಣಾಭಿವೃದ್ಧಿಯಲ್ಲಿ ಯಾವುದೇ ಸಾಧನೆ ಮಾಡದ ಪ್ರಿಯಾಂಕ್ ಮಾತನಾಡುವುದನ್ನೇ ಸಾಧನೆ ಎಂದುಕೊಂಡಿದ್ದಾರೆ’ ಎಂದು ಟೀಕಿಸಿದರು. </p>.<p>‘ಶಿಕ್ಷಣದಲ್ಲಿ ಕಲ್ಯಾಣ ಕರ್ನಾಟಕ ಹಿಂದುಳಿದಿದ್ದು, ಕೈಗಾರಿಕೆಗಳು ಕರ್ನಾಟಕದಿಂದ ವಲಸೆ ಹೋಗಿದ್ದು, ಗೂಗಲ್ ಸಂಸ್ಥೆಯವರು ಸುಮಾರು 1 ಲಕ್ಷ 30 ಸಾವಿರ ಕೋಟಿ ರೂಪಾಯಿ ಮೊತ್ತದ ಬಂಡವಾಳ ಹೂಡಿಕೆಯನ್ನು ಕರ್ನಾಟಕದಿಂದ ಆಂಧ್ರಪ್ರದೇಶಕ್ಕೆ ವರ್ಗಾವಣೆ ಮಾಡಿದಾಗ ಪ್ರಿಯಾಂಕ್ ಖರ್ಗೆ ಅವರು ನಾಲಾಯಕ್ ಮಂತ್ರಿ ಎಂದು ಸಾಬೀತಾಗಿದೆ’ ಎಂದು ಹೇಳಿದರು.</p>.<p>‘370ನೇ ವಿಧಿ ರದ್ದತಿ, ದೇಶದ ಆಂತರಿಕ ಭದ್ರತೆ ಸುಧಾರಣೆ, ಪಿಎಫ್ಐ ನಿಷೇಧ ಮತ್ತಿತರ ಉತ್ತಮ ಕಾರ್ಯಗಳನ್ನು ಮಾಡಿರುವ ಅಮಿತ್ ಶಾ ಅವರ ಬಗ್ಗೆ ಮಾತನಾಡುವ ನೈತಿಕತೆ ಪ್ರಿಯಾಂಕ್ ಅವರಿಗೆ ಇಲ್ಲ’ ಎಂದರು.</p>.<p>ಗೋಷ್ಠಿಯಲ್ಲಿ ಗಿರಿರಾಜ ಎಳಿಮೇಲಿ, ಸಪ್ನಾ ಮಂಗಲಗಿ, ಅನಿಲ್ ಸಿರನೂರಕರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ‘ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ‘ನಾಲಾಯಕ್’ ಪದ ಬಳಸಿ ಟೀಕಿಸಿದ್ದು ಖಂಡನೀಯ. ಈ ಮೂಲಕ ತಮ್ಮನ್ನು ತಾವೇ ಯೋಗ್ಯತೆ ಮತ್ತು ನಾಗರಿಕತೆ ಇಲ್ಲದ ವ್ಯಕ್ತಿ ಎಂದು ನಿರೂಪಿಸಿಕೊಂಡಿದ್ದಾರೆ’ ಎಂದು ಬಿಜೆಪಿ ರಾಜ್ಯ ವಕ್ತಾರೆ ಸುಧಾ ಹಾಲಕೈ ಹೇಳಿದರು.</p>.<p>ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವ್ಯಕ್ತಿತ್ವವೇ ಇಲ್ಲದಂತಹ ಪ್ರಿಯಾಂಕ್ ಖರ್ಗೆ ನಿಜವಾದ ಅರ್ಥದಲ್ಲಿ ಕರ್ನಾಟಕದ ನಾಲಾಯಕ್ ಮಂತ್ರಿ. ತಮ್ಮ ಐಟಿ–ಬಿಟಿ, ಗ್ರಾಮೀಣಾಭಿವೃದ್ಧಿಯಲ್ಲಿ ಯಾವುದೇ ಸಾಧನೆ ಮಾಡದ ಪ್ರಿಯಾಂಕ್ ಮಾತನಾಡುವುದನ್ನೇ ಸಾಧನೆ ಎಂದುಕೊಂಡಿದ್ದಾರೆ’ ಎಂದು ಟೀಕಿಸಿದರು. </p>.<p>‘ಶಿಕ್ಷಣದಲ್ಲಿ ಕಲ್ಯಾಣ ಕರ್ನಾಟಕ ಹಿಂದುಳಿದಿದ್ದು, ಕೈಗಾರಿಕೆಗಳು ಕರ್ನಾಟಕದಿಂದ ವಲಸೆ ಹೋಗಿದ್ದು, ಗೂಗಲ್ ಸಂಸ್ಥೆಯವರು ಸುಮಾರು 1 ಲಕ್ಷ 30 ಸಾವಿರ ಕೋಟಿ ರೂಪಾಯಿ ಮೊತ್ತದ ಬಂಡವಾಳ ಹೂಡಿಕೆಯನ್ನು ಕರ್ನಾಟಕದಿಂದ ಆಂಧ್ರಪ್ರದೇಶಕ್ಕೆ ವರ್ಗಾವಣೆ ಮಾಡಿದಾಗ ಪ್ರಿಯಾಂಕ್ ಖರ್ಗೆ ಅವರು ನಾಲಾಯಕ್ ಮಂತ್ರಿ ಎಂದು ಸಾಬೀತಾಗಿದೆ’ ಎಂದು ಹೇಳಿದರು.</p>.<p>‘370ನೇ ವಿಧಿ ರದ್ದತಿ, ದೇಶದ ಆಂತರಿಕ ಭದ್ರತೆ ಸುಧಾರಣೆ, ಪಿಎಫ್ಐ ನಿಷೇಧ ಮತ್ತಿತರ ಉತ್ತಮ ಕಾರ್ಯಗಳನ್ನು ಮಾಡಿರುವ ಅಮಿತ್ ಶಾ ಅವರ ಬಗ್ಗೆ ಮಾತನಾಡುವ ನೈತಿಕತೆ ಪ್ರಿಯಾಂಕ್ ಅವರಿಗೆ ಇಲ್ಲ’ ಎಂದರು.</p>.<p>ಗೋಷ್ಠಿಯಲ್ಲಿ ಗಿರಿರಾಜ ಎಳಿಮೇಲಿ, ಸಪ್ನಾ ಮಂಗಲಗಿ, ಅನಿಲ್ ಸಿರನೂರಕರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>