<p><strong>ಕಲಬುರಗಿ</strong>: ‘ಆಪರೇಷನ್ ಸಿಂಧೂರ್ ಬಗೆಗೆ ಕಾಂಗ್ರೆಸ್ ಪಕ್ಷದ ಮುಖಂಡರು ಮನಬಂದಂತೆ ಹೇಳಿಕೆಗಳನ್ನು ನೀಡುತ್ತಿರುವುದು ಖಂಡನೀಯ’ ಎಂದು ಬಿಜೆಪಿ ವಕ್ತಾರೆ ಡಾ. ಸುಧಾ ಹಾಲಕೈ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಭಯೋತ್ಪಾದಕರ ತಾಣಗಳಿಗೆ ನಿಖರವಾಗಿ ಗುರಿಯಿಟ್ಟು ಧ್ವಂಸಗೊಳಿಸಿದ ಭಾರತೀಯ ಸೈನಿಕರ ಬಗೆಗೆ ಶಾಸಕ ಕೊತ್ತೂರು ಮಂಜುನಾಥ ಸೇರಿದಂತೆ ಕಾಂಗ್ರೆಸ್ ಮುಖಂಡರು ಆಡುತ್ತಿರುವ ಮಾತು ಬೇಸರ ತಂದಿದೆ’ ಎಂದರು.</p>.<p>‘ಜಿಲ್ಲೆಯ ಅಭಿವೃದ್ಧಿ ಬಗೆಗೆ ಯೋಚಿಸಿದೇ ಬರೀ ರಾಜಕೀಯ ಮಾಡುತ್ತಿರುವ ಸಚಿವ ಪ್ರಿಯಾಂಕ್ ಖರ್ಗೆ, ಸೇನಾ ಹೋರಾಟ, ಕದನ ವಿರಾಮ ಕುರಿತು ಪ್ರಧಾನಿಗೆ ಯಾವ ನೈತಿಕತೆಯಿಂದ ಪ್ರಶ್ನೆಗಳ ಕೇಳುತ್ತಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ‘ಆಪರೇಷನ್ ಸಿಂಧೂರ್ ಬಗೆಗೆ ಕಾಂಗ್ರೆಸ್ ಪಕ್ಷದ ಮುಖಂಡರು ಮನಬಂದಂತೆ ಹೇಳಿಕೆಗಳನ್ನು ನೀಡುತ್ತಿರುವುದು ಖಂಡನೀಯ’ ಎಂದು ಬಿಜೆಪಿ ವಕ್ತಾರೆ ಡಾ. ಸುಧಾ ಹಾಲಕೈ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಭಯೋತ್ಪಾದಕರ ತಾಣಗಳಿಗೆ ನಿಖರವಾಗಿ ಗುರಿಯಿಟ್ಟು ಧ್ವಂಸಗೊಳಿಸಿದ ಭಾರತೀಯ ಸೈನಿಕರ ಬಗೆಗೆ ಶಾಸಕ ಕೊತ್ತೂರು ಮಂಜುನಾಥ ಸೇರಿದಂತೆ ಕಾಂಗ್ರೆಸ್ ಮುಖಂಡರು ಆಡುತ್ತಿರುವ ಮಾತು ಬೇಸರ ತಂದಿದೆ’ ಎಂದರು.</p>.<p>‘ಜಿಲ್ಲೆಯ ಅಭಿವೃದ್ಧಿ ಬಗೆಗೆ ಯೋಚಿಸಿದೇ ಬರೀ ರಾಜಕೀಯ ಮಾಡುತ್ತಿರುವ ಸಚಿವ ಪ್ರಿಯಾಂಕ್ ಖರ್ಗೆ, ಸೇನಾ ಹೋರಾಟ, ಕದನ ವಿರಾಮ ಕುರಿತು ಪ್ರಧಾನಿಗೆ ಯಾವ ನೈತಿಕತೆಯಿಂದ ಪ್ರಶ್ನೆಗಳ ಕೇಳುತ್ತಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>