<p><strong>ಕಲಬುರಗಿ:</strong> ಟನ್ ಕಬ್ಬಿಗೆ ₹3,500 ದರ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ವಿವಿಧೆಡೆ ಹೋರಾಟ ಮುಂದುವರಿದಿದೆ.</p>.<p>ಮೈಸೂರು, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿಯೂ ಹೋರಾಟ ಮುಂದುವರಿದಿದೆ.</p>.<p>ಕಲಬುರಗಿ ಜಿಲ್ಲೆಯ ಅಫಜಲಪುರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸ್ವಾಭಿಮಾನಿ ಕಬ್ಬು ಬೆಳೆಗಾರರ ಹೋರಾಟ ಸಮಿತಿ ನೇತೃತ್ವದ ಹೋರಾಟ ಶುಕ್ರವಾರ ಮೂರು ದಿನ ಪೂರೈಸಿತು.</p>.<p>ಮತ್ತೊಂದೆಡೆ ಯಡ್ರಾಮಿ ತಾಲ್ಲೂಕಿನ ಮಳ್ಳಿ–ನಾಗರಹಳ್ಳಿಯಲ್ಲಿರುವ ದಿ ಉಗರ್ ಶುಗರ್ ಕಾರ್ಖಾನೆ ಮುಂಭಾಗದಲ್ಲಿ ಶುಕ್ರವಾರ ರೈತರು ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ.</p>.<p>ರಾಜ್ಯ ರೈತ ಸಂಘ, ಹಾಗೂ ಹಸಿರು ಸೇನೆ, ಬಿಸಿಲು ನಾಡಿನ ಹಸಿರು ಸೇನೆ, ಕರವೇ ಉತ್ತರ ಕರ್ನಾಟಕ ಘಟಕ (ಪ್ರವೀಣ ಶೆಟ್ಟಿ ಬಣ) ಮತ್ತು ಸಮಸ್ತ ಬೆಳೆಗಾರರ ಜಂಟಿ ಆಶ್ರಯದಲ್ಲಿ ಹೋರಾಟ ನಡೆಯುತ್ತಿದೆ.</p>.<p>ನೂರಾರು ರೈತರು ಪಟ್ಟಣದಿಂದ ಸಿಂದಗಿಗೆ ತೆರಳುವ ರಸ್ತೆ ಮೂರು ತಾಸು ಬಂದ್ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ವಾಹನಗಳ ಸವಾರರು, ಪ್ರಯಾಣಿಕರು ಪರದಾಡಿದರು.</p>.<p><strong>ಹೋರಾಟಕ್ಕೆ ಮೈಸೂರಲ್ಲೂ ಬೆಂಬಲ</strong></p>.<p>ಮೈಸೂರು: ಬೆಳಗಾವಿ ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರ ಹೋರಾಟ ಬೆಂಬಲಿಸಿ ಮೈಸೂರು ಭಾಗದ ಜಿಲ್ಲೆಗಳ ರೈತರು ಶುಕ್ರವಾರ ಬೆಂಗಳೂರು –ಮಂಗಳೂರು ರಾಷ್ಟ್ರೀಯ ಹೆದ್ದಾರಿ– 275ರಲ್ಲಿ ರೈತರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. </p>.<p>ಪಿರಿಯಾಪಟ್ಟಣ, ಹುಣಸೂರು, ನಂಜನಗೂಡು ಹಾಗೂ ಕೆ.ಆರ್.ನಗರ ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯಿತು. ಹಾಸನ, ಮಂಡ್ಯ, ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲೂ ಪ್ರತಿಭಟಿಸಿದರು.</p>.<div><blockquote>ಬೆಳಗಾವಿ ಜನಪ್ರತಿನಿಧಿಗಳು ಮತ್ತು ಸಕ್ಕರೆ ಕಾರ್ಖಾನೆಗಳ ಲಾಬಿಗೆ ಮುಖ್ಯಮಂತ್ರಿ ಮಣಿದಿದ್ದಾರೆ. ತಮ್ಮ ತಪ್ಪಿಗೆ ಪ್ರಧಾನಿಯನ್ನು ಇಕ್ಕಟಿಗೆ ಸಿಲುಕಿಸುವ ರಾಜಕೀಯ ಮಾಡುತ್ತಿದ್ದಾರೆ </blockquote><span class="attribution">ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವ</span></div>.<p> <strong>ಲೋಕಾಪುರ ಇಂಡಿ ಬಂದ್ ಯಶಸ್ವಿ</strong></p><p><strong>ಬಾಗಲಕೋಟೆ: ಕ</strong>ಬ್ಬಿಗೆ ದರ ನಿಗದಿಗೆ ಆಗ್ರಹಿಸಿ ಜಿಲ್ಲೆಯ ಲೋಕಾಪುರ ಬಂದ್ ಯಶಸ್ವಿಯಾಯಿತು. ಜಿಲ್ಲೆಯಾದ್ಯಂತ ವಾಹನಗಳ ಸಂಚಾರ ಅಸ್ತವ್ಯಸ್ತವಾಗಿತ್ತು. ಅಂಗಡಿ ವಹಿವಾಟು ಬಂದ್ ಮಾಡಿದ್ದರು. ಪಟ್ಟಣ ಸ್ತಬ್ಧವಾಗಿತ್ತು. ಜಿಲ್ಲೆಯ ವಿವಿಧೆಡೆಯೂ ರಸ್ತೆ ತಡೆ ನಡೆಸಲಾಯಿತು. ಇಂಡಿ ಬಂದ್: ವಿಜಯಪುರ ಜಿಲ್ಲೆಯ ವಿವಿಧೆಡೆ ರೈತರು ಧರಣಿ ಹೆದ್ದಾರಿ ತಡೆ ಇಂಡಿ ಪಟ್ಟಣ ಬಂದ್ ನಡೆಸಿದರು. ಇಂಡಿ ಪಟ್ಟಣ ಭಾಗಶಃ ಬಂದ್ ಆಗಿತ್ತು. ಹೂವಿನಹಡಗಲಿ (ವಿಜಯನಗರ ಜಿಲ್ಲೆ): ರೈತರು ತಾಲ್ಲೂಕಿನ ಬೀರಬ್ಬಿಯ ಮೈಲಾರ ಶುಗರ್ಸ್ ಕಾರ್ಖಾನೆಯನ್ನು ರೈತರು ಬಂದ್ ಮಾಡಿಸಿ ಪ್ರತಿಭಟಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಟನ್ ಕಬ್ಬಿಗೆ ₹3,500 ದರ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ವಿವಿಧೆಡೆ ಹೋರಾಟ ಮುಂದುವರಿದಿದೆ.</p>.<p>ಮೈಸೂರು, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿಯೂ ಹೋರಾಟ ಮುಂದುವರಿದಿದೆ.</p>.<p>ಕಲಬುರಗಿ ಜಿಲ್ಲೆಯ ಅಫಜಲಪುರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸ್ವಾಭಿಮಾನಿ ಕಬ್ಬು ಬೆಳೆಗಾರರ ಹೋರಾಟ ಸಮಿತಿ ನೇತೃತ್ವದ ಹೋರಾಟ ಶುಕ್ರವಾರ ಮೂರು ದಿನ ಪೂರೈಸಿತು.</p>.<p>ಮತ್ತೊಂದೆಡೆ ಯಡ್ರಾಮಿ ತಾಲ್ಲೂಕಿನ ಮಳ್ಳಿ–ನಾಗರಹಳ್ಳಿಯಲ್ಲಿರುವ ದಿ ಉಗರ್ ಶುಗರ್ ಕಾರ್ಖಾನೆ ಮುಂಭಾಗದಲ್ಲಿ ಶುಕ್ರವಾರ ರೈತರು ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ.</p>.<p>ರಾಜ್ಯ ರೈತ ಸಂಘ, ಹಾಗೂ ಹಸಿರು ಸೇನೆ, ಬಿಸಿಲು ನಾಡಿನ ಹಸಿರು ಸೇನೆ, ಕರವೇ ಉತ್ತರ ಕರ್ನಾಟಕ ಘಟಕ (ಪ್ರವೀಣ ಶೆಟ್ಟಿ ಬಣ) ಮತ್ತು ಸಮಸ್ತ ಬೆಳೆಗಾರರ ಜಂಟಿ ಆಶ್ರಯದಲ್ಲಿ ಹೋರಾಟ ನಡೆಯುತ್ತಿದೆ.</p>.<p>ನೂರಾರು ರೈತರು ಪಟ್ಟಣದಿಂದ ಸಿಂದಗಿಗೆ ತೆರಳುವ ರಸ್ತೆ ಮೂರು ತಾಸು ಬಂದ್ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ವಾಹನಗಳ ಸವಾರರು, ಪ್ರಯಾಣಿಕರು ಪರದಾಡಿದರು.</p>.<p><strong>ಹೋರಾಟಕ್ಕೆ ಮೈಸೂರಲ್ಲೂ ಬೆಂಬಲ</strong></p>.<p>ಮೈಸೂರು: ಬೆಳಗಾವಿ ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರ ಹೋರಾಟ ಬೆಂಬಲಿಸಿ ಮೈಸೂರು ಭಾಗದ ಜಿಲ್ಲೆಗಳ ರೈತರು ಶುಕ್ರವಾರ ಬೆಂಗಳೂರು –ಮಂಗಳೂರು ರಾಷ್ಟ್ರೀಯ ಹೆದ್ದಾರಿ– 275ರಲ್ಲಿ ರೈತರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. </p>.<p>ಪಿರಿಯಾಪಟ್ಟಣ, ಹುಣಸೂರು, ನಂಜನಗೂಡು ಹಾಗೂ ಕೆ.ಆರ್.ನಗರ ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯಿತು. ಹಾಸನ, ಮಂಡ್ಯ, ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲೂ ಪ್ರತಿಭಟಿಸಿದರು.</p>.<div><blockquote>ಬೆಳಗಾವಿ ಜನಪ್ರತಿನಿಧಿಗಳು ಮತ್ತು ಸಕ್ಕರೆ ಕಾರ್ಖಾನೆಗಳ ಲಾಬಿಗೆ ಮುಖ್ಯಮಂತ್ರಿ ಮಣಿದಿದ್ದಾರೆ. ತಮ್ಮ ತಪ್ಪಿಗೆ ಪ್ರಧಾನಿಯನ್ನು ಇಕ್ಕಟಿಗೆ ಸಿಲುಕಿಸುವ ರಾಜಕೀಯ ಮಾಡುತ್ತಿದ್ದಾರೆ </blockquote><span class="attribution">ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವ</span></div>.<p> <strong>ಲೋಕಾಪುರ ಇಂಡಿ ಬಂದ್ ಯಶಸ್ವಿ</strong></p><p><strong>ಬಾಗಲಕೋಟೆ: ಕ</strong>ಬ್ಬಿಗೆ ದರ ನಿಗದಿಗೆ ಆಗ್ರಹಿಸಿ ಜಿಲ್ಲೆಯ ಲೋಕಾಪುರ ಬಂದ್ ಯಶಸ್ವಿಯಾಯಿತು. ಜಿಲ್ಲೆಯಾದ್ಯಂತ ವಾಹನಗಳ ಸಂಚಾರ ಅಸ್ತವ್ಯಸ್ತವಾಗಿತ್ತು. ಅಂಗಡಿ ವಹಿವಾಟು ಬಂದ್ ಮಾಡಿದ್ದರು. ಪಟ್ಟಣ ಸ್ತಬ್ಧವಾಗಿತ್ತು. ಜಿಲ್ಲೆಯ ವಿವಿಧೆಡೆಯೂ ರಸ್ತೆ ತಡೆ ನಡೆಸಲಾಯಿತು. ಇಂಡಿ ಬಂದ್: ವಿಜಯಪುರ ಜಿಲ್ಲೆಯ ವಿವಿಧೆಡೆ ರೈತರು ಧರಣಿ ಹೆದ್ದಾರಿ ತಡೆ ಇಂಡಿ ಪಟ್ಟಣ ಬಂದ್ ನಡೆಸಿದರು. ಇಂಡಿ ಪಟ್ಟಣ ಭಾಗಶಃ ಬಂದ್ ಆಗಿತ್ತು. ಹೂವಿನಹಡಗಲಿ (ವಿಜಯನಗರ ಜಿಲ್ಲೆ): ರೈತರು ತಾಲ್ಲೂಕಿನ ಬೀರಬ್ಬಿಯ ಮೈಲಾರ ಶುಗರ್ಸ್ ಕಾರ್ಖಾನೆಯನ್ನು ರೈತರು ಬಂದ್ ಮಾಡಿಸಿ ಪ್ರತಿಭಟಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>