<p><strong>ಕಮಲಾಪುರ</strong> (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಜೀವಣಗಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ವ್ಯಕ್ತಿಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p><p>ವೆಂಕಟರಾವ ಧರ್ವೆ (45) ಆತ್ಮಹತ್ಯೆ ಮಾಡಿಕೊಂಡವರು.</p><p>ಜೀವಣಗಿಯಲ್ಲಿನ ಮನೆಯಲ್ಲಿ ವೆಂಕಟರಾವ್ ಒಬ್ಬರೇ ವಾಸಿಸುತ್ತಿದ್ದರು. ರಾತ್ರಿ 8ಕ್ಕೆ ಪುತ್ರ ಮನೀಷ್ ಅವರಿಗೆ ವಿಡಿಯೊ ಕಾಲ್ ಮಾಡಿ ಮಾತನಾಡಿದ್ದು, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿ ಫೋನ್ ಕಟ್ ಮಾಡಿದ್ದರು. ಮುಂಬೈನಲ್ಲಿದ್ದ ಮನೀಷ್ ಜೀವಣಗಿಯಲ್ಲಿನ ತಮ್ಮ ಪಕ್ಕದ ಮನೆಯವರಿಗೆ ವಿಷಯ ತಿಳಿಸಿದ್ದಾರೆ. ಅವರು ತೆರಳಿ ನೋಡುವಷ್ಟರಲ್ಲಿ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಾಗಿಲಿಗೆ ಒಳಗಿನಿಂದ ಚಿಲಕ ಹಾಕಿದ್ದರಿಂದ ರಕ್ಷಿಸಲು ಆಗಿಲ್ಲ. ಬಾಗಿಲು ಮುರಿದು ನೋಡುವಷ್ಟರಲ್ಲಿ ವೆಂಕಟರಾವ್ ಸುಟ್ಟು ಕರಕಲಾಗಿದ್ದರು.</p><p>ವರ್ಷದ ಹಿಂದೆ ಅವರ ತಾಯಿ ತೀರಿಕೊಂಡಿದ್ದರು. 6 ತಿಂಗಳ ಹಿಂದೆ ಮುಂಬೈನಲ್ಲಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೂರು ತಿಂಗಳ ಹಿಂದೆ ತಂದೆ ತೀರಿಕೊಂಡಿದ್ದರು. ಇದರಿಂದ ಮಾನಸಿಕವಾಗಿ ಅಸ್ವಸ್ಥ ಗೊಂಡಿದ್ದ ವೆಂಕಟರಾವ್ ಆತ್ಮಹತ್ಯೆ ಮಾಡಿ ಕೊಂಡಿರಬಹುದೆಂದು ಶಂಕಿಸಲಾಗಿದೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.</p><p>ಅವರಿಗೆ ಮೂವರು ಪುತ್ರರು, ಒಬ್ಬ ಪುತ್ರಿ ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲಾಪುರ</strong> (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಜೀವಣಗಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ವ್ಯಕ್ತಿಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p><p>ವೆಂಕಟರಾವ ಧರ್ವೆ (45) ಆತ್ಮಹತ್ಯೆ ಮಾಡಿಕೊಂಡವರು.</p><p>ಜೀವಣಗಿಯಲ್ಲಿನ ಮನೆಯಲ್ಲಿ ವೆಂಕಟರಾವ್ ಒಬ್ಬರೇ ವಾಸಿಸುತ್ತಿದ್ದರು. ರಾತ್ರಿ 8ಕ್ಕೆ ಪುತ್ರ ಮನೀಷ್ ಅವರಿಗೆ ವಿಡಿಯೊ ಕಾಲ್ ಮಾಡಿ ಮಾತನಾಡಿದ್ದು, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿ ಫೋನ್ ಕಟ್ ಮಾಡಿದ್ದರು. ಮುಂಬೈನಲ್ಲಿದ್ದ ಮನೀಷ್ ಜೀವಣಗಿಯಲ್ಲಿನ ತಮ್ಮ ಪಕ್ಕದ ಮನೆಯವರಿಗೆ ವಿಷಯ ತಿಳಿಸಿದ್ದಾರೆ. ಅವರು ತೆರಳಿ ನೋಡುವಷ್ಟರಲ್ಲಿ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಾಗಿಲಿಗೆ ಒಳಗಿನಿಂದ ಚಿಲಕ ಹಾಕಿದ್ದರಿಂದ ರಕ್ಷಿಸಲು ಆಗಿಲ್ಲ. ಬಾಗಿಲು ಮುರಿದು ನೋಡುವಷ್ಟರಲ್ಲಿ ವೆಂಕಟರಾವ್ ಸುಟ್ಟು ಕರಕಲಾಗಿದ್ದರು.</p><p>ವರ್ಷದ ಹಿಂದೆ ಅವರ ತಾಯಿ ತೀರಿಕೊಂಡಿದ್ದರು. 6 ತಿಂಗಳ ಹಿಂದೆ ಮುಂಬೈನಲ್ಲಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೂರು ತಿಂಗಳ ಹಿಂದೆ ತಂದೆ ತೀರಿಕೊಂಡಿದ್ದರು. ಇದರಿಂದ ಮಾನಸಿಕವಾಗಿ ಅಸ್ವಸ್ಥ ಗೊಂಡಿದ್ದ ವೆಂಕಟರಾವ್ ಆತ್ಮಹತ್ಯೆ ಮಾಡಿ ಕೊಂಡಿರಬಹುದೆಂದು ಶಂಕಿಸಲಾಗಿದೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.</p><p>ಅವರಿಗೆ ಮೂವರು ಪುತ್ರರು, ಒಬ್ಬ ಪುತ್ರಿ ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>