<p><strong>ಕಲಬುರಗಿ:</strong> ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿರುವ ಕಲಬುರಗಿ ರಂಗಾಯಣದ ನಿರ್ದೇಶಕಿಯಾಗಿ ರಂಗಕರ್ಮಿ ಸುಜಾತಾ ಜಂಗಮಶೆಟ್ಟಿ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.</p>.<p>ದಶಕದ ಹಿಂದೆ ಆರಂಭವಾದ ಕಲಬುರಗಿ ರಂಗಾಯಣಕ್ಕೆ ಸುಜಾತಾ ಮೊದಲ ಮಹಿಳಾ ನಿರ್ದೇಶಕಿಯಾಗಿ ನೇಮಕವಾಗಿದ್ದಾರೆ.</p>.<p>ರಂಗಾಯಣ ಆಡಳಿತಾಧಿಕಾರಿ ಜಗದೇಶ್ವರಿ ಶಿವಕೇರಿ ಅವರು ಸುಜಾತಾ ಅವರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು.</p>.<p>ಸುಜಾತಾ ಅವರು ಆಕಾಶವಾಣಿಯ ನಾಟಕ ವಿಭಾಗದಲ್ಲಿ, ‘ಬಿ’ ಹೈ ಶ್ರೇಣಿ ಕಲಾವಿದರಾಗಿದ್ದು, ದೂರದರ್ಶನ ಮತ್ತು ಆಕಾಶವಾಣಿಯಲ್ಲಿ ಉದ್ಘೋಷಕಿಯಾಗಿದ್ದರು. ಟಿವಿ ಧಾರಾವಾಹಿ ಮತ್ತು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.</p>.<p>ಕರ್ನಾಟಕ ನಾಟಕ ಅಕಾಡೆಮಿ ಸದಸ್ಯರಾಗಿ, ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿ.ವಿ. ಸಿಂಡಿಕೇಟ್ ಸದಸ್ಯರಾಗಿ, ರಂಗಸಮಾಜದ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ. ವೃತ್ತಿ ರಂಗಭೂಮಿಯವರಿಗೆ ಕೊಡಮಾಡುವ ಗುಬ್ಬಿ ವೀರಣ್ಣ ರಂಗ ಪ್ರಶಸ್ತಿ ಸಮಿತಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ.</p>.<p>ನಿಕಟಪೂರ್ವ ನಿರ್ದೇಶಕ ಪ್ರಭಾಕರ ಜೋಶಿ ಅವರ ಅವಧಿ ಮುಗಿದ ಬಳಿಕ ನಿರ್ದೇಶಕ ಸ್ಥಾನ ಖಾಲಿ ಇತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿರುವ ಕಲಬುರಗಿ ರಂಗಾಯಣದ ನಿರ್ದೇಶಕಿಯಾಗಿ ರಂಗಕರ್ಮಿ ಸುಜಾತಾ ಜಂಗಮಶೆಟ್ಟಿ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.</p>.<p>ದಶಕದ ಹಿಂದೆ ಆರಂಭವಾದ ಕಲಬುರಗಿ ರಂಗಾಯಣಕ್ಕೆ ಸುಜಾತಾ ಮೊದಲ ಮಹಿಳಾ ನಿರ್ದೇಶಕಿಯಾಗಿ ನೇಮಕವಾಗಿದ್ದಾರೆ.</p>.<p>ರಂಗಾಯಣ ಆಡಳಿತಾಧಿಕಾರಿ ಜಗದೇಶ್ವರಿ ಶಿವಕೇರಿ ಅವರು ಸುಜಾತಾ ಅವರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು.</p>.<p>ಸುಜಾತಾ ಅವರು ಆಕಾಶವಾಣಿಯ ನಾಟಕ ವಿಭಾಗದಲ್ಲಿ, ‘ಬಿ’ ಹೈ ಶ್ರೇಣಿ ಕಲಾವಿದರಾಗಿದ್ದು, ದೂರದರ್ಶನ ಮತ್ತು ಆಕಾಶವಾಣಿಯಲ್ಲಿ ಉದ್ಘೋಷಕಿಯಾಗಿದ್ದರು. ಟಿವಿ ಧಾರಾವಾಹಿ ಮತ್ತು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.</p>.<p>ಕರ್ನಾಟಕ ನಾಟಕ ಅಕಾಡೆಮಿ ಸದಸ್ಯರಾಗಿ, ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿ.ವಿ. ಸಿಂಡಿಕೇಟ್ ಸದಸ್ಯರಾಗಿ, ರಂಗಸಮಾಜದ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ. ವೃತ್ತಿ ರಂಗಭೂಮಿಯವರಿಗೆ ಕೊಡಮಾಡುವ ಗುಬ್ಬಿ ವೀರಣ್ಣ ರಂಗ ಪ್ರಶಸ್ತಿ ಸಮಿತಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ.</p>.<p>ನಿಕಟಪೂರ್ವ ನಿರ್ದೇಶಕ ಪ್ರಭಾಕರ ಜೋಶಿ ಅವರ ಅವಧಿ ಮುಗಿದ ಬಳಿಕ ನಿರ್ದೇಶಕ ಸ್ಥಾನ ಖಾಲಿ ಇತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>