ಗುರುಲಿಂಗ ಸ್ವಾಮೀಜಿ ಅಕ್ಟೋಬರ್ 27ರಂದು ಶ್ರೀಮಠದಿಂದ ಸ್ವಂತ ಕಾರಿನಲ್ಲಿ ತೆರಳುವಾಗ ಕಲಬುರ್ಗಿ ಬಳಿಯ ಕಪನೂರ ಹತ್ತಿರ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಅಂದಿನಿಂದ ಕಲಬುರ್ಗಿಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ ಶ್ರೀಗಳು ಕೆಲ ದಿನಗಳ ಕಾಲ ಶ್ರೀಮಠದಲ್ಲಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳ ಮತ್ತು ಚಿತ್ರದುರ್ಗಕ್ಕೆ ಕಳುಹಿಸಲಾಗಿತ್ತು.