ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಯಾದಗಿರಿ ಜಿಲ್ಲೆ ಶಹಾಪುರ ತಾಲ್ಲೂಕು ಗೋಗಿ ಗ್ರಾಮದ ಸಯ್ಯದ್ ಶಂಷಾಲಮ್ ಎಂಬ ಯುವಕನ ಮೆದುಳಿಗೆ ಹಾನಿಯಾಗಿದ್ದರಿಂದ ಕಾಲಾಂತ ರದಲ್ಲಿ ಮೆದುಳಿನ ಒಂದು ಭಾಗ ಕರಗಿ ಮೂಗಿನ ತುದಿಯಲ್ಲಿ ಕುಳಿತುಕೊಂಡಿತ್ತು. ಇದರಿಂದಾಗಿ ತಲೆನೋವು ಕಾಣಿಸಿಕೊಳ್ಳುತ್ತಿತ್ತು. ಅಲ್ಲದೇ, ಸುಮಾರು ಏಳು ಬಾರಿ ಐಸಿಯುನಲ್ಲಿ ದಾಖಲಿಸಲಾಗಿತ್ತು. ಸಾಮಾನ್ಯವಾಗಿ ಇಂತಹ ಸಂದರ್ಭದಲ್ಲಿ ಮೆದುಳಿನ ಮೇಲ್ಭಾಗವನ್ನು ತೆರೆಯಬೇಕಾಗುತ್ತಿತ್ತು. ಈ ವಿಧಾನದಲ್ಲಿ ಸಾಕಷ್ಟು ರಕ್ತ ನಷ್ಟವಾಗುತ್ತಿತ್ತು. ಅಲ್ಲದೇ, ಶಸ್ತ್ರಚಿಕಿತ್ಸೆ ಯಶಸ್ವಿಯಾಗುವ ಬಗ್ಗೆ ಅನುಮಾನಗಳಿದ್ದವು. ಆದ್ದರಿಂದ ಮೂಗಿನ ಮೂಲಕ ಎಂಡೊಸ್ಕೊಪಿ ವಿಧಾನವನ್ನು ಬಳಸಿ ಮೆದುಳಿನ ಅಂಶ ಇರುವ ಜಾಗವು ಸೋರಿ ಹೋಗದಂತೆ ತಡೆಯಲು ಸೊಂಟದ ಭಾಗದ ಕೊಬ್ಬನ್ನು ಬಳಸಿ ಮೆದುಳಿನ ಕೆಳಭಾಗದಲ್ಲಿ ಅಂಟಿಸಲಾಯಿತು’
ಎಂದರು.