ಆದರೆ, ಚಿಂಚೋಳಿಯ ಐನೊಳ್ಳಿ ಮತ್ತು ಗಡಿಲಿಂಗದಳ್ಳಿಯಲ್ಲಿ ಗ್ರಹಣ ಮುಕ್ತಾಯವಾದ ಬಳಿಕವೇ ಮಕ್ಕಳನ್ನು ತಿಪ್ಪೆಯಿಂದ ಹೊರಗೆ ತೆರೆಯಲಾಯಿತು. ಮೇಕೆಯ ಹಿಕ್ಕೆಗಳನ್ನು ಸಂಗ್ರಹಿಸಿರುವ ತಿಪ್ಪೆಯ ಗೊಬ್ಬರವು ಬಿಸಿಲಿಗೆ ಕಾಯ್ದು ಸಾಕಷ್ಟು ಬಿಸಿಯಾಗಿರುತ್ತದೆ. ಅಲ್ಲಿಯೇ ಗುಂಡಿ ತೋಡಿ ಮಕ್ಕಳನ್ನು ಇಳಿಸಿದ್ದರಿಂದ ಸಾಕಷ್ಟು ಬಿಸಿಯಾಗಿ ಮಕ್ಕಳು ಅಳಲು ಆರಂಭಿಸಿದ್ದವು. ಆದರೂ, ಪಟ್ಟು ಬಿಡದ ಪೋಷಕರು ಮಕ್ಕಳನ್ನು ಮೇಲೆತ್ತದಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಯಿತು.