ರೈತರ ನ್ಯಾಯಸಮಮ್ಮ ಬೇಡಿಕೆಗಳಿಗೆ ನಮ್ಮ ಬೆಂಬಲವಿದೆ. ಈ ಹೋರಾಟ ಹತ್ತಿಕ್ಕಲು ಕೇಂದ್ರ ಸರ್ಕಾರ ವಾಮಮಾರ್ಗ ಅನುಸರಿಸಿ ರೈತರನ್ನು ಹಿಂಸೆ ಮಾಡುತ್ತಿದೆ. ರೈತರಿಗೆ ಅನ್ಯಾಯ ಆಗುವಂಥ, ಕಾರ್ಪೊರೇಟ್ ಸಂಸ್ಥೆಗಳನ್ನು ಸಾಕುವಂಥ ಕಾಯ್ದೆಗಳನ್ನು ಜಾರಿಗೆ ತರುತ್ತಿದೆ. ಇದ ಹೀಗೆ ಮುಂದುವರಿದರೆ ದೇಶವೇ ಬಂಡವಾಳಶಾಹಿಗಳ ಗುಲಾಮಗಿರಿಗೆ ಬೀಳುತ್ತದೆ. ಆದ್ದರಿಂದ ಬಂದ್ ಅನಿವಾರ್ಯ ಎಂದು ಎಐಡಿಎಸ್ಒ ಜಿಲ್ಲಾ ಘಟಕದ ಅಧ್ಯಕ್ಷ ಹಣಮಂತ ಎಸ್.ಎಚ್., ಕಾರ್ಯದರ್ಶಿ ಈರಣ್ಣ ಇಸಬಾ, ಎಸ್ಎಫ್ಐ ಜಿಲ್ಲಾ ಘಟಕದ ಅಧ್ಯಕ್ಷ ಲಾರಿ ದೊಡ್ಡಮನಿ, ಸಿದ್ದಲಿಂಗ ಪಾಳ, ಕೆವಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರ ರಾಜೋಳ ತಿಳಿಸಿದ್ದಾರೆ.