‘ಚುನಾವಣೆ ಪದ್ಧತಿ ಸುಧಾರಣೆಯಾಗುವುದು ಅವಶ್ಯವಿದೆ. ಭ್ರಷ್ಟಾಚಾರ ನಿರ್ಮೂಲನೆ ಮಾಡಿ, ದೇಶ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸಿಬೇಕಿದೆ. ಸಂಸದರು, ಶಾಸಕರ ಮೇಲಿರುವ ಕ್ರಿಮಿನಲ್ ಪ್ರಕರಣಗಳ ಬಗ್ಗೆ ಚರ್ಚೆಯಾಗಬೇಕು ಎಂಬ ದೂರದೃಷ್ಟಿ ಇರಿಸಿಕೊಂಡು ಒಬ್ಬೊಂಟಿಯಾಗಿ ಹೋರಾಟ ಮಾಡುತ್ತಿದ್ದಾರೆ. ಆದರೆ, ರಮೇಶ ಅವರ ಹೋರಾಟ ಜನರಿಗೆ ತಲುಪುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.