<p><strong>ಕಲಬುರಗಿ:</strong> ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ವಕೀಲರೊಬ್ಬರು ಶೂ ಎಸೆಯಲು ಯತ್ನಿಸಿದ್ದನ್ನು ಖಂಡಿಸಿ ನಗರದಲ್ಲಿ ವಿವಿಧ ದಲಿತಪರ ಸಂಘಟನೆಗಳು ಸೋಮವಾರ ಸಂಜೆ ದಿಢೀರ್ ಪ್ರತಿಭಟನೆ ನಡೆಸಿದವು.</p><p>‘ಕೋಮುವಾದಿಗಳಿಗೆ ಧಿಕ್ಕಾರ’, ‘ಜಾತಿವಾದಿಗಳಿಗೆ ಧಿಕ್ಕಾರ’ ಎಂದು ಪ್ರತಿಭಟನಕಾರರು ಘೋಷಣೆ ಕೂಗಿದರು. ‘ಶೂ’ ಎಸೆದ ವಕೀಲನ ಚಿತ್ರ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.</p><p>ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಕಲಬುರಗಿ ತಾಲ್ಲೂಕು ಪಂಚಾಯಿತಿಯಿಂದ ಜಿಲ್ಲಾಧಿಕಾರಿ ಕಚೇರಿ ತನಕ ಪ್ರತಿಭಟನಾ ಮೆರವಣಿಗೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಎದುರಿನ ರಸ್ತೆಯಲ್ಲಿ 10 ನಿಮಿಷ ವಾಹನಗಳ ಸಂಚಾರ ತಡೆದು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.</p><p>ಸಂಘದ ರಾಜ್ಯಾಧ್ಯಕ್ಷ ಡಿ.ಜಿ.ಸಾಗರ ಮಾತನಾಡಿ, ‘ಸುಪ್ರೀಂಕೋರ್ಟ್ನಲ್ಲೇ ಸಿಜೆ ವಿರುದ್ಧ ಶೂ ಎಸೆದ ಘೋರ ಕೃತ್ಯ ಖಂಡನೀಯ. ಇದು ಸಂವಿಧಾನ, ದೇಶ ಹಾಗೂ ನ್ಯಾಯಾಲಯಕ್ಕೆ ಮಾಡಿದ ಅವಮಾನವಾಗಿದೆ. ಈ ಕೃತ್ಯದ ಹಿಂದೆ ಯಾರೆಲ್ಲರ ಕೈವಾಡವಿದೆ ಎಂಬುದನ್ನು ಪತ್ತೆ ಮಾಡಿ, ಆರೋಪಿ ಸಹಿತ ಎಲ್ಲರಿಗೂ ಕಠಿಣ ಶಿಕ್ಷೆ ವಿಧಿಸಬೇಕು’ ಎಂದು ಆಗ್ರಹಿಸಿದರು.</p><p>ಈ ಸಂಬಂಧ ಮನವಿಯನ್ನು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಲಾಯಿತು.</p><p>ಮುಖಂಡರಾದ ಸುರೇಶ ಹಾದಿಮನಿ, ಬಿ.ಸಿ.ವಾಲಿ, ಎಸ್.ಪಿ.ಸುಳ್ಳದ, ಅಂಬಣ್ಣ ಜೀವಣಗಿ, ಎಚ್. ಶಂಕರ್ ಸೇರಿದಂತೆ ಹಲವರರು ಪಾಲ್ಗೊಂಡಿದ್ದರು.</p><p>ಇದಕ್ಕೂ ಮುನ್ನ ರಿಪಬ್ಲಿಕನ್ ಯೂತ್ ಫೆಡರೇಷನ್ ಕಾರ್ಯಕರ್ತರು ಕೂಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಮುಖಂಡರಾದ ಹನುಮಂತ ಇಟಗಿ, ಸಂತೋಷ ಮೇಲ್ಮನಿ, ಸಿದ್ದು ಬೆಳಸೂರ, ಶಿವಕುಮಾರ, ರಾಘವೇಂದ್ರ ವಾಳಿಕಾರ ಸೇರಿದಂತೆ ಹಲವರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ವಕೀಲರೊಬ್ಬರು ಶೂ ಎಸೆಯಲು ಯತ್ನಿಸಿದ್ದನ್ನು ಖಂಡಿಸಿ ನಗರದಲ್ಲಿ ವಿವಿಧ ದಲಿತಪರ ಸಂಘಟನೆಗಳು ಸೋಮವಾರ ಸಂಜೆ ದಿಢೀರ್ ಪ್ರತಿಭಟನೆ ನಡೆಸಿದವು.</p><p>‘ಕೋಮುವಾದಿಗಳಿಗೆ ಧಿಕ್ಕಾರ’, ‘ಜಾತಿವಾದಿಗಳಿಗೆ ಧಿಕ್ಕಾರ’ ಎಂದು ಪ್ರತಿಭಟನಕಾರರು ಘೋಷಣೆ ಕೂಗಿದರು. ‘ಶೂ’ ಎಸೆದ ವಕೀಲನ ಚಿತ್ರ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.</p><p>ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಕಲಬುರಗಿ ತಾಲ್ಲೂಕು ಪಂಚಾಯಿತಿಯಿಂದ ಜಿಲ್ಲಾಧಿಕಾರಿ ಕಚೇರಿ ತನಕ ಪ್ರತಿಭಟನಾ ಮೆರವಣಿಗೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಎದುರಿನ ರಸ್ತೆಯಲ್ಲಿ 10 ನಿಮಿಷ ವಾಹನಗಳ ಸಂಚಾರ ತಡೆದು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.</p><p>ಸಂಘದ ರಾಜ್ಯಾಧ್ಯಕ್ಷ ಡಿ.ಜಿ.ಸಾಗರ ಮಾತನಾಡಿ, ‘ಸುಪ್ರೀಂಕೋರ್ಟ್ನಲ್ಲೇ ಸಿಜೆ ವಿರುದ್ಧ ಶೂ ಎಸೆದ ಘೋರ ಕೃತ್ಯ ಖಂಡನೀಯ. ಇದು ಸಂವಿಧಾನ, ದೇಶ ಹಾಗೂ ನ್ಯಾಯಾಲಯಕ್ಕೆ ಮಾಡಿದ ಅವಮಾನವಾಗಿದೆ. ಈ ಕೃತ್ಯದ ಹಿಂದೆ ಯಾರೆಲ್ಲರ ಕೈವಾಡವಿದೆ ಎಂಬುದನ್ನು ಪತ್ತೆ ಮಾಡಿ, ಆರೋಪಿ ಸಹಿತ ಎಲ್ಲರಿಗೂ ಕಠಿಣ ಶಿಕ್ಷೆ ವಿಧಿಸಬೇಕು’ ಎಂದು ಆಗ್ರಹಿಸಿದರು.</p><p>ಈ ಸಂಬಂಧ ಮನವಿಯನ್ನು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಲಾಯಿತು.</p><p>ಮುಖಂಡರಾದ ಸುರೇಶ ಹಾದಿಮನಿ, ಬಿ.ಸಿ.ವಾಲಿ, ಎಸ್.ಪಿ.ಸುಳ್ಳದ, ಅಂಬಣ್ಣ ಜೀವಣಗಿ, ಎಚ್. ಶಂಕರ್ ಸೇರಿದಂತೆ ಹಲವರರು ಪಾಲ್ಗೊಂಡಿದ್ದರು.</p><p>ಇದಕ್ಕೂ ಮುನ್ನ ರಿಪಬ್ಲಿಕನ್ ಯೂತ್ ಫೆಡರೇಷನ್ ಕಾರ್ಯಕರ್ತರು ಕೂಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಮುಖಂಡರಾದ ಹನುಮಂತ ಇಟಗಿ, ಸಂತೋಷ ಮೇಲ್ಮನಿ, ಸಿದ್ದು ಬೆಳಸೂರ, ಶಿವಕುಮಾರ, ರಾಘವೇಂದ್ರ ವಾಳಿಕಾರ ಸೇರಿದಂತೆ ಹಲವರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>