<p><strong>ಕಲಬುರ್ಗಿ: </strong>‘ರಸ್ತೆ ಅಪಘಾತದಲ್ಲಿ ಬಲಗೈ ತುಂಡರಿಸಿದ್ದ 19 ವರ್ಷದ ಯುವಕನಿಗೆ ಇಲ್ಲಿನಮಣೂರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಇದೊಂದು ಅಪರೂಪದ ಪ್ರಕರಣ’ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಫಾರೂಖ್ ಮನೂರ ತಿಳಿಸಿದ್ದಾರೆ.</p>.<p>‘ನಗರದ ಸೋನಿಯಾ ಗಾಂಧಿ ಕಾಲೊನಿಯ ನಿವಾಸಿ ಇಸ್ಮಾಯಿಲ್ ವಾಜೀದ್ ಎಂಬ ಯುವಕನಿಗೆ ಅಪಘಾತದಲ್ಲಿ ಮೊಣಕೈ, ತೋಳು, ಭುಜಕ್ಕೆ ತೀವ್ರ ಪೆಟ್ಟುಬಿದ್ದಿತ್ತು. ತೀವ್ರ ರಕ್ತಸ್ರಾವವಾಗಿತ್ತು. ಮನೂರ ಆಸ್ಪತ್ರೆಯ ವೈದ್ಯರ ತಂಡ ಈ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿ ಸತತ ಆರು ತಾಸು ಶಸ್ತ್ರಚಿಕಿತ್ಸೆ ನಡೆಸಿತು. ಈಗ ಯುವಕ ಸಂಪೂರ್ಣ ಗುಣಮುಖವಾಗಿದ್ದಾನೆ’ ಎಂದೂ ಅವರು ಮಾಹಿತಿ ನೀಡಿದ್ದಾರೆ.</p>.<p>‘ಮೊಣಕೈ ಸ್ನಾಯು ತುಂಡರಿಸಿದ ಕಾರಣ ಎಲುಬಿನ ಸ್ಥಿರೀಕರಣಕ್ಕೆ (ಸಾಮಾನ್ಯ ಫ್ಲೆಕ್ಟರ್ ಸ್ನಾಯುವಿನ ದುರಸ್ತಿ) ಒಳಪಡಿಸಲಾಯಿತು. ಹಿಮೋಡೈನಮಿಕ್ ಆಗಿ ಸ್ಥಿರಗೊಳಿಸಿದ ನಂತರ ಯುವಕನ ಮೊಳಕಾಲಿನ ಚರ್ಮ ಲೇಪಿಸಿ ಕಸಿ ಮಾಡಲಾಗಿದೆ’ ಎಂದು ಪ್ಲಾಸ್ಟಿಕ್ ಸರ್ಜನ್ ಡಾ.ಅನೀಲ್ ಮಲ್ಹಾರಿ ಮಾಹಿತಿ ತಿಳಿಸಿದ್ದಾರೆ.</p>.<p>ಡಾ.ಫಾರೂಖ ಅಹ್ಮದ್ ಮನೂರ ಮಾರ್ಗದರ್ಶನದಲ್ಲಿ ಅರಿವಳಿಕೆ ತಜ್ಞ ಡಾ.ಎಸ್.ಕೆ.ಅನಿಲ್, ಪ್ಲಾಸ್ಟಿಕ್ ಸರ್ಜನ್ ಡಾ.ಪವನ್, ಮುಖ್ಯ ಆರ್ಥೊ ಸರ್ಜರಿ ಡಾ.ಎಂ.ಡಿ. ಎಸ್. ಅಹ್ಮದ್, ಅಂಥೋಸ್ಟಿಟ್ ಡಾ.ಶಫಿಯಾ ಈ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದರು. ಡಾ.ಸನಾ, ಡಾ.ಜುಬೇದಾ, ಜನರಲ್ ಮ್ಯಾನೇಜರ್ ರೂಪಾತಾರಾ, ಮ್ಯಾನೇಜರ್ ಸೂರ್ಯ ರೆಡ್ಡಿ ಇದಕ್ಕೆನೆರವಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>‘ರಸ್ತೆ ಅಪಘಾತದಲ್ಲಿ ಬಲಗೈ ತುಂಡರಿಸಿದ್ದ 19 ವರ್ಷದ ಯುವಕನಿಗೆ ಇಲ್ಲಿನಮಣೂರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಇದೊಂದು ಅಪರೂಪದ ಪ್ರಕರಣ’ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಫಾರೂಖ್ ಮನೂರ ತಿಳಿಸಿದ್ದಾರೆ.</p>.<p>‘ನಗರದ ಸೋನಿಯಾ ಗಾಂಧಿ ಕಾಲೊನಿಯ ನಿವಾಸಿ ಇಸ್ಮಾಯಿಲ್ ವಾಜೀದ್ ಎಂಬ ಯುವಕನಿಗೆ ಅಪಘಾತದಲ್ಲಿ ಮೊಣಕೈ, ತೋಳು, ಭುಜಕ್ಕೆ ತೀವ್ರ ಪೆಟ್ಟುಬಿದ್ದಿತ್ತು. ತೀವ್ರ ರಕ್ತಸ್ರಾವವಾಗಿತ್ತು. ಮನೂರ ಆಸ್ಪತ್ರೆಯ ವೈದ್ಯರ ತಂಡ ಈ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿ ಸತತ ಆರು ತಾಸು ಶಸ್ತ್ರಚಿಕಿತ್ಸೆ ನಡೆಸಿತು. ಈಗ ಯುವಕ ಸಂಪೂರ್ಣ ಗುಣಮುಖವಾಗಿದ್ದಾನೆ’ ಎಂದೂ ಅವರು ಮಾಹಿತಿ ನೀಡಿದ್ದಾರೆ.</p>.<p>‘ಮೊಣಕೈ ಸ್ನಾಯು ತುಂಡರಿಸಿದ ಕಾರಣ ಎಲುಬಿನ ಸ್ಥಿರೀಕರಣಕ್ಕೆ (ಸಾಮಾನ್ಯ ಫ್ಲೆಕ್ಟರ್ ಸ್ನಾಯುವಿನ ದುರಸ್ತಿ) ಒಳಪಡಿಸಲಾಯಿತು. ಹಿಮೋಡೈನಮಿಕ್ ಆಗಿ ಸ್ಥಿರಗೊಳಿಸಿದ ನಂತರ ಯುವಕನ ಮೊಳಕಾಲಿನ ಚರ್ಮ ಲೇಪಿಸಿ ಕಸಿ ಮಾಡಲಾಗಿದೆ’ ಎಂದು ಪ್ಲಾಸ್ಟಿಕ್ ಸರ್ಜನ್ ಡಾ.ಅನೀಲ್ ಮಲ್ಹಾರಿ ಮಾಹಿತಿ ತಿಳಿಸಿದ್ದಾರೆ.</p>.<p>ಡಾ.ಫಾರೂಖ ಅಹ್ಮದ್ ಮನೂರ ಮಾರ್ಗದರ್ಶನದಲ್ಲಿ ಅರಿವಳಿಕೆ ತಜ್ಞ ಡಾ.ಎಸ್.ಕೆ.ಅನಿಲ್, ಪ್ಲಾಸ್ಟಿಕ್ ಸರ್ಜನ್ ಡಾ.ಪವನ್, ಮುಖ್ಯ ಆರ್ಥೊ ಸರ್ಜರಿ ಡಾ.ಎಂ.ಡಿ. ಎಸ್. ಅಹ್ಮದ್, ಅಂಥೋಸ್ಟಿಟ್ ಡಾ.ಶಫಿಯಾ ಈ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದರು. ಡಾ.ಸನಾ, ಡಾ.ಜುಬೇದಾ, ಜನರಲ್ ಮ್ಯಾನೇಜರ್ ರೂಪಾತಾರಾ, ಮ್ಯಾನೇಜರ್ ಸೂರ್ಯ ರೆಡ್ಡಿ ಇದಕ್ಕೆನೆರವಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>