<p><strong>ಕಲಬುರಗಿ:</strong> ನವೀಕರಿಸಬಹುದಾದ ಇಂಧನ ಮೂಲಗಳ ಬಳಕೆ ಉತ್ತೇಜಿಸಿ ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವ ಉದ್ದೇಶದಿಂದ ಕೇಂದ್ರ ಜಾರಿಗೆ ತಂದ ‘ಪ್ರಧಾನಮಂತ್ರಿ ಸೂರ್ಯಘರ್ ಮುಫ್ತ್ ಬಿಜಲಿ ಯೋಜನೆ’ ಜಾರಿಯಲ್ಲಿ ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ (ಜೆಸ್ಕಾಂ) ಹಿಂದೆ ಬಿದ್ದಿದೆ.</p>.<p>ಬಿಸಿಲಿನ ಕಾರಣಕ್ಕಾಗಿಯೇ ಗುರುತಿಸಿಕೊಂಡಿರುವ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಸೌರಶಕ್ತಿಯನ್ನು ಗರಿಷ್ಠ ಮಟ್ಟದಲ್ಲಿ ಬಳಸಿಕೊಳ್ಳಲು ಅವಕಾಶ ಇದೆ. ಆದರೂ ಇಲ್ಲಿನ ಜನ ಮನೆಗಳ ಚಾವಣಿ ಮೇಲೆ ಸೌರಫಲಕ ಅಳವಡಿಸಿಕೊಳ್ಳಲು ಮುಂದೆ ಬರುತ್ತಿಲ್ಲ.</p>.<p>ರಾಜ್ಯದಲ್ಲಿ ಸರ್ಕಾರ ‘ಗೃಹಜ್ಯೋತಿ’ಯ ಗ್ಯಾರಂಟಿ ನೀಡುವ ಮೂಲಕ 200 ಯುನಿಟ್ವರೆಗೂ ಉಚಿತ ವಿದ್ಯುತ್ ನೀಡುತ್ತಿರುವುದೂ ಹಾಗೂ ಪ್ರಚಾರದ ಕೊರತೆ ಈ ಯೋಜನೆಯ ತೆವಳುವಿಕೆಗೆ ಕಾರಣವಾಗಿದೆ.</p>.<p>ಯೋಜನೆ ಜಾರಿಗೆ ಬಂದ ದಿನದಿಂದ ಸೆಪ್ಟೆಂಬರ್ವರೆಗೂ ಏಳು ಜಿಲ್ಲೆಗಳ ವ್ಯಾಪ್ತಿಯಲ್ಲಿ ಕೇವಲ 614 ಕುಟುಂಬಗಳು ಈ ಯೋಜನೆಯ ಲಾಭ ಪಡೆದಿವೆ. ರಾಜ್ಯದ ಐದು ಎಸ್ಕಾಂಗಳ ಪೈಕಿ ಬೆಸ್ಕಾಂ ವ್ಯಾಪ್ತಿಯಲ್ಲಿ ಹೆಚ್ಚು ಅಂದರೆ 4,476 ಕುಟುಂಬಗಳು ಈ ಯೋಜನೆಯ ಲಾಭ ಪಡೆದಿವೆ. ಎರಡನೇ ಸ್ಥಾನದಲ್ಲಿ ಮೆಸ್ಕಾಂ ಇದೆ. ಇಲ್ಲಿ 2,390 ಕುಟುಂಬಗಳು ಸೂರ್ಯಫಲಕ ಅಳವಡಿಸಿಕೊಂಡಿವೆ. ಮೂರನೇ ಸ್ಥಾನದಲ್ಲಿ ಹೆಸ್ಕಾಂ, ನಾಲ್ಕನೇ ಸ್ಥಾನದಲ್ಲಿ ಸೆಸ್ಕ್ ಇದೆ. ಕೊನೆಯ ಸ್ಥಾನದಲ್ಲಿ ಜೆಸ್ಕಾಂ ಇದೆ.</p>.<p><strong>ಬಳ್ಳಾರಿ ಪ್ರಥಮ:</strong> ಜೆಸ್ಕಾಂ ವ್ಯಾಪ್ತಿಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಹೆಚ್ಚು ಜನ ಯೋಜನೆಯ ಲಾಭ ಪಡೆದುಕೊಂಡಿದ್ದಾರೆ. 157 ಕುಟುಂಬಗಳು ಸೂರ್ಯಫಲಕಗಳನ್ನು ಅಳವಡಿಸಿಕೊಂಡಿವೆ. ಎರಡನೇ ಸ್ಥಾನದಲ್ಲಿ ಕಲಬುರಗಿ ಹಾಗೂ ಮೂರನೇ ಸ್ಥಾನದಲ್ಲಿ ರಾಯಚೂರು ಇದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದ್ದು, ಇಲ್ಲಿ ಕೇವಲ 15 ಕುಟುಂಬಗಳು ಈ ಯೋಜನೆಯ ಲಾಭ ಪಡೆದಿವೆ.</p>.<p>ಈ ಯೋಜನೆಯಡಿ ಕೇಂದ್ರ ಸರ್ಕಾರ ಜೆಸ್ಕಾಂಗೆ ₹4.14 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಈ ಅನುದಾನವನ್ನು ನೇರವಾಗಿ ಗ್ರಾಹಕರಿಗೆ ತಲುಪಿಸಲಾಗಿದೆ. </p>.<p>ಈ ಸಂಬಂಧ ಪ್ರತಿಕ್ರಿಯೆ ಪಡೆಯಲು ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಎಇಇ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದಾಗ ಸಂಪರ್ಕಕ್ಕೆ ಸಿಗಲಿಲ್ಲ.</p>.<h2>ಅರ್ಹತೆಗಳು </h2><h2>* ಯೋಜನೆಗೆ ಅರ್ಜಿ ಸಲ್ಲಿಸುವವರು ಭಾರತದ ನಿವಾಸಿಯಾಗಿರಬೇಕು</h2><p>* ಸ್ವಂತ ಮನೆ ಹಾಗೂ ಮನೆ ಚಾವಣಿ ಮೇಲೆ ಜಾಗ ಹೊಂದಿರಬೇಕು</p><p>* ವಿದ್ಯುತ್ ಸಂಪರ್ಕ ಹೊಂದಿರಬೇಕು</p><p>* ಬೇರೆ ಯೋಜನೆಗಳಡಿ ಸೌರಫಲಕ ಅಳವಡಿಕೆಗೆ ಸಹಾಯಧನ ಪಡೆದಿರಬಾರದು</p>.<p><strong>ಯೋಜನೆಯ ಲಾಭಗಳು</strong></p><p> * 300 ಯುನಿಟ್ ವಿದ್ಯುತ್ ಬಳಕೆಗೆ ಅವಕಾಶ</p><p>* ಮಾಸಿಕ ವಿದ್ಯುತ್ ಬಿಲ್ನಲ್ಲಿ ಉಳಿತಾಯ</p><p>* ಪರಿಸರ ಮಾಲಿನ್ಯ ನಿಯಂತ್ರಣ* ಮನೆಯ ಚಾವಣಿಯ ಸದ್ಬಳಕೆ</p><p>* ಹೆಚ್ಚುವರಿ ವಿದ್ಯುತ್ ಮಾರಾಟದಿಂದ ಲಾಭ</p><p>* ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ನವೀಕರಿಸಬಹುದಾದ ಇಂಧನ ಮೂಲಗಳ ಬಳಕೆ ಉತ್ತೇಜಿಸಿ ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವ ಉದ್ದೇಶದಿಂದ ಕೇಂದ್ರ ಜಾರಿಗೆ ತಂದ ‘ಪ್ರಧಾನಮಂತ್ರಿ ಸೂರ್ಯಘರ್ ಮುಫ್ತ್ ಬಿಜಲಿ ಯೋಜನೆ’ ಜಾರಿಯಲ್ಲಿ ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ (ಜೆಸ್ಕಾಂ) ಹಿಂದೆ ಬಿದ್ದಿದೆ.</p>.<p>ಬಿಸಿಲಿನ ಕಾರಣಕ್ಕಾಗಿಯೇ ಗುರುತಿಸಿಕೊಂಡಿರುವ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಸೌರಶಕ್ತಿಯನ್ನು ಗರಿಷ್ಠ ಮಟ್ಟದಲ್ಲಿ ಬಳಸಿಕೊಳ್ಳಲು ಅವಕಾಶ ಇದೆ. ಆದರೂ ಇಲ್ಲಿನ ಜನ ಮನೆಗಳ ಚಾವಣಿ ಮೇಲೆ ಸೌರಫಲಕ ಅಳವಡಿಸಿಕೊಳ್ಳಲು ಮುಂದೆ ಬರುತ್ತಿಲ್ಲ.</p>.<p>ರಾಜ್ಯದಲ್ಲಿ ಸರ್ಕಾರ ‘ಗೃಹಜ್ಯೋತಿ’ಯ ಗ್ಯಾರಂಟಿ ನೀಡುವ ಮೂಲಕ 200 ಯುನಿಟ್ವರೆಗೂ ಉಚಿತ ವಿದ್ಯುತ್ ನೀಡುತ್ತಿರುವುದೂ ಹಾಗೂ ಪ್ರಚಾರದ ಕೊರತೆ ಈ ಯೋಜನೆಯ ತೆವಳುವಿಕೆಗೆ ಕಾರಣವಾಗಿದೆ.</p>.<p>ಯೋಜನೆ ಜಾರಿಗೆ ಬಂದ ದಿನದಿಂದ ಸೆಪ್ಟೆಂಬರ್ವರೆಗೂ ಏಳು ಜಿಲ್ಲೆಗಳ ವ್ಯಾಪ್ತಿಯಲ್ಲಿ ಕೇವಲ 614 ಕುಟುಂಬಗಳು ಈ ಯೋಜನೆಯ ಲಾಭ ಪಡೆದಿವೆ. ರಾಜ್ಯದ ಐದು ಎಸ್ಕಾಂಗಳ ಪೈಕಿ ಬೆಸ್ಕಾಂ ವ್ಯಾಪ್ತಿಯಲ್ಲಿ ಹೆಚ್ಚು ಅಂದರೆ 4,476 ಕುಟುಂಬಗಳು ಈ ಯೋಜನೆಯ ಲಾಭ ಪಡೆದಿವೆ. ಎರಡನೇ ಸ್ಥಾನದಲ್ಲಿ ಮೆಸ್ಕಾಂ ಇದೆ. ಇಲ್ಲಿ 2,390 ಕುಟುಂಬಗಳು ಸೂರ್ಯಫಲಕ ಅಳವಡಿಸಿಕೊಂಡಿವೆ. ಮೂರನೇ ಸ್ಥಾನದಲ್ಲಿ ಹೆಸ್ಕಾಂ, ನಾಲ್ಕನೇ ಸ್ಥಾನದಲ್ಲಿ ಸೆಸ್ಕ್ ಇದೆ. ಕೊನೆಯ ಸ್ಥಾನದಲ್ಲಿ ಜೆಸ್ಕಾಂ ಇದೆ.</p>.<p><strong>ಬಳ್ಳಾರಿ ಪ್ರಥಮ:</strong> ಜೆಸ್ಕಾಂ ವ್ಯಾಪ್ತಿಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಹೆಚ್ಚು ಜನ ಯೋಜನೆಯ ಲಾಭ ಪಡೆದುಕೊಂಡಿದ್ದಾರೆ. 157 ಕುಟುಂಬಗಳು ಸೂರ್ಯಫಲಕಗಳನ್ನು ಅಳವಡಿಸಿಕೊಂಡಿವೆ. ಎರಡನೇ ಸ್ಥಾನದಲ್ಲಿ ಕಲಬುರಗಿ ಹಾಗೂ ಮೂರನೇ ಸ್ಥಾನದಲ್ಲಿ ರಾಯಚೂರು ಇದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದ್ದು, ಇಲ್ಲಿ ಕೇವಲ 15 ಕುಟುಂಬಗಳು ಈ ಯೋಜನೆಯ ಲಾಭ ಪಡೆದಿವೆ.</p>.<p>ಈ ಯೋಜನೆಯಡಿ ಕೇಂದ್ರ ಸರ್ಕಾರ ಜೆಸ್ಕಾಂಗೆ ₹4.14 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಈ ಅನುದಾನವನ್ನು ನೇರವಾಗಿ ಗ್ರಾಹಕರಿಗೆ ತಲುಪಿಸಲಾಗಿದೆ. </p>.<p>ಈ ಸಂಬಂಧ ಪ್ರತಿಕ್ರಿಯೆ ಪಡೆಯಲು ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಎಇಇ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದಾಗ ಸಂಪರ್ಕಕ್ಕೆ ಸಿಗಲಿಲ್ಲ.</p>.<h2>ಅರ್ಹತೆಗಳು </h2><h2>* ಯೋಜನೆಗೆ ಅರ್ಜಿ ಸಲ್ಲಿಸುವವರು ಭಾರತದ ನಿವಾಸಿಯಾಗಿರಬೇಕು</h2><p>* ಸ್ವಂತ ಮನೆ ಹಾಗೂ ಮನೆ ಚಾವಣಿ ಮೇಲೆ ಜಾಗ ಹೊಂದಿರಬೇಕು</p><p>* ವಿದ್ಯುತ್ ಸಂಪರ್ಕ ಹೊಂದಿರಬೇಕು</p><p>* ಬೇರೆ ಯೋಜನೆಗಳಡಿ ಸೌರಫಲಕ ಅಳವಡಿಕೆಗೆ ಸಹಾಯಧನ ಪಡೆದಿರಬಾರದು</p>.<p><strong>ಯೋಜನೆಯ ಲಾಭಗಳು</strong></p><p> * 300 ಯುನಿಟ್ ವಿದ್ಯುತ್ ಬಳಕೆಗೆ ಅವಕಾಶ</p><p>* ಮಾಸಿಕ ವಿದ್ಯುತ್ ಬಿಲ್ನಲ್ಲಿ ಉಳಿತಾಯ</p><p>* ಪರಿಸರ ಮಾಲಿನ್ಯ ನಿಯಂತ್ರಣ* ಮನೆಯ ಚಾವಣಿಯ ಸದ್ಬಳಕೆ</p><p>* ಹೆಚ್ಚುವರಿ ವಿದ್ಯುತ್ ಮಾರಾಟದಿಂದ ಲಾಭ</p><p>* ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>