<p><strong>ಕಲಬುರ್ಗಿ:</strong> ಕೊರೊನಾ ಸೋಂಕು ಹರಡುತ್ತಿರುವ ಕಾರಣ ಸುರಕ್ಷತೆ ಹಿತದೃಷ್ಟಿಯಿಂದ ಸುಗಮವಾಗಿ ನ್ಯಾಯಾಲಯದ ಕಲಾಪ ನಡೆಸಲು ಜಿಲ್ಲಾ ತರಬೇತಿ ಕೇಂದ್ರದಲ್ಲಿ ಸ್ಥಾಪಿಸಲಾಗಿರುವ ವರ್ಚುವಲ್ ನ್ಯಾಯಾಲಯ ಕೇಂದ್ರವನ್ನು ಹೈಕೋರ್ಟ್ನ ಹಿರಿಯ ನ್ಯಾಯಮೂರ್ತಿ ಜಿ.ನರೇಂದರ್ ಉದ್ಘಾಟಿಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಸೋಂಕು ತೀವ್ರವಾಗಿ ವ್ಯಾಪಿಸುತ್ತಿರುವ ಕಾರಣ ಎಲ್ಲರ ಹಿತದೃಷ್ಟಿಯಿಂದ ವರ್ಚುವಲ್ ನ್ಯಾಯಾಲಯ ಕೇಂದ್ರವನ್ನು ಸ್ಥಾಪಿಸಿದ್ದು, ಅದರ ಕಾರ್ಯವಿಧಾನ ಮತ್ತು ಪ್ರಯೋಜನವನ್ನು ವಕೀಲರು ಸೇರಿದಂತೆ ಎಲ್ಲರೂ ಅರಿತುಕೊಳ್ಳಬೇಕು’ ಎಂದರು.</p>.<p>‘ಮೂರು ದಿನಗಳ ಕಂಪ್ಯೂಟರ್ ತರಬೇತಿಯನ್ನು ವಕೀಲರು ಸದ್ಬಳಕೆ ಮಾಡಿಕೊಳ್ಳಬೇಕು. ಕಂಪ್ಯೂಟರ್ ಮೂಲಕ ಪ್ರಕರಣ ದಾಖಲಿಸುವ ಮತ್ತು ನಡೆಸುವ ಕುರಿತು ತರಬೇತಿ ಪಡೆದುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಇದೇ ಪ್ರಕ್ರಿಯೆ ತುಂಬಾ ಉಪಯುಕ್ತವಾಗಿದೆ’ ಎಂದರು.</p>.<p>ನ್ಯಾಯಮೂರ್ತಿ ಪಿ.ಎನ್. ದೇಸಾಯಿ, ಜಿಲ್ಲಾಧಿಕಾರಿ ಶರತ್.ಬಿ, ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ, ಕಲಬುರ್ಗಿ ಜಿಲ್ಲಾ ಪ್ರಭಾರಿ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಶುಕಲಾಕ್ಷ ಪಾಲನ್, ಗುಲಬರ್ಗಾ ವಕೀಲರ ಸಂಘದ ಅಧ್ಯಕ್ಷ ಅರುಣಕುಮಾರ್ ಕಿಣ್ಣಿ, ವಕೀಲ ನಂದಕಿಶೋರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ಕೊರೊನಾ ಸೋಂಕು ಹರಡುತ್ತಿರುವ ಕಾರಣ ಸುರಕ್ಷತೆ ಹಿತದೃಷ್ಟಿಯಿಂದ ಸುಗಮವಾಗಿ ನ್ಯಾಯಾಲಯದ ಕಲಾಪ ನಡೆಸಲು ಜಿಲ್ಲಾ ತರಬೇತಿ ಕೇಂದ್ರದಲ್ಲಿ ಸ್ಥಾಪಿಸಲಾಗಿರುವ ವರ್ಚುವಲ್ ನ್ಯಾಯಾಲಯ ಕೇಂದ್ರವನ್ನು ಹೈಕೋರ್ಟ್ನ ಹಿರಿಯ ನ್ಯಾಯಮೂರ್ತಿ ಜಿ.ನರೇಂದರ್ ಉದ್ಘಾಟಿಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಸೋಂಕು ತೀವ್ರವಾಗಿ ವ್ಯಾಪಿಸುತ್ತಿರುವ ಕಾರಣ ಎಲ್ಲರ ಹಿತದೃಷ್ಟಿಯಿಂದ ವರ್ಚುವಲ್ ನ್ಯಾಯಾಲಯ ಕೇಂದ್ರವನ್ನು ಸ್ಥಾಪಿಸಿದ್ದು, ಅದರ ಕಾರ್ಯವಿಧಾನ ಮತ್ತು ಪ್ರಯೋಜನವನ್ನು ವಕೀಲರು ಸೇರಿದಂತೆ ಎಲ್ಲರೂ ಅರಿತುಕೊಳ್ಳಬೇಕು’ ಎಂದರು.</p>.<p>‘ಮೂರು ದಿನಗಳ ಕಂಪ್ಯೂಟರ್ ತರಬೇತಿಯನ್ನು ವಕೀಲರು ಸದ್ಬಳಕೆ ಮಾಡಿಕೊಳ್ಳಬೇಕು. ಕಂಪ್ಯೂಟರ್ ಮೂಲಕ ಪ್ರಕರಣ ದಾಖಲಿಸುವ ಮತ್ತು ನಡೆಸುವ ಕುರಿತು ತರಬೇತಿ ಪಡೆದುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಇದೇ ಪ್ರಕ್ರಿಯೆ ತುಂಬಾ ಉಪಯುಕ್ತವಾಗಿದೆ’ ಎಂದರು.</p>.<p>ನ್ಯಾಯಮೂರ್ತಿ ಪಿ.ಎನ್. ದೇಸಾಯಿ, ಜಿಲ್ಲಾಧಿಕಾರಿ ಶರತ್.ಬಿ, ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ, ಕಲಬುರ್ಗಿ ಜಿಲ್ಲಾ ಪ್ರಭಾರಿ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಶುಕಲಾಕ್ಷ ಪಾಲನ್, ಗುಲಬರ್ಗಾ ವಕೀಲರ ಸಂಘದ ಅಧ್ಯಕ್ಷ ಅರುಣಕುಮಾರ್ ಕಿಣ್ಣಿ, ವಕೀಲ ನಂದಕಿಶೋರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>