<p><strong>ಕಲಬುರಗಿ:</strong> ಚಿತ್ತಾಪುರ ತಾಲ್ಲೂಕಿನ ನಾಲವಾರದ ಕೋರಿಸಿದ್ದೇಶ್ವರ ಸಂಸ್ಥಾನ ಮಠದಲ್ಲಿ ಗುರುವಾರ ತನಾರತಿ ಉತ್ಸವವು ಸಹಸ್ರಾರು ಭಕ್ತರ ಮಧ್ಯೆ ಭಕ್ತಿ ಭಾವದಿಂದ ನೆರವೇರಿತು.</p>.<p>ಅಕ್ಷಯತದಿಗೆ ಅಮಾವಾಸ್ಯೆಯ ಅಂಗವಾಗಿ ಕೋರಿಸಿದ್ದೇಶ್ವರರ ಕರ್ತೃ ಗದ್ದುಗೆಗೆ ವಿಶೇಷ ಪೂಜೆ, ರುದ್ರಾಭಿಷೇಕ ಮಾಡಲಾಯಿತು. ಪೀಠಾಧಿಪತಿ ಸಿದ್ದತೋಟೇಂದ್ರ ಶಿವಾಚಾರ್ಯರ ಸಾನ್ನಿಧ್ಯದಲ್ಲಿ ಹಲವು ಮಠಾಧೀಶರ ಸಮ್ಮುಖದಲ್ಲಿ ಮಾಸಿಕ ಶಿವಾನುಭವ ಚಿಂತನ, ಸಂಗೀತ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.</p>.<p>ಗುರುವಾರ ಬೆಳಿಗ್ಗೆ ಸಿದ್ದತೋಟೇಂದ್ರ ಶಿವಾಚಾರ್ಯರು ಪಾರಂಪರಿಕ ಉಡುಪು ಧರಿಸಿ ತನಾರತಿ ಉತ್ಸವದ ನೇತೃತ್ವ ವಹಿಸಿದ್ದರು. ಪುರವಂತಿಕೆ, ಪೂರ್ಣಕುಂಭ, ಬಾಜಾ-ಭಜಂತ್ರಿ, ವೈದಿಕರ ವೇದಘೋಷಗಳೊಂದಿಗೆ ಮಧ್ಯರಾತ್ರಿ ಪ್ರಾರಂಭವಾಗಿ ಬೆಳಗಿನ ಜಾವದ ವರೆಗೂ ನಡೆಯಿತು.</p>.<p>ಮಧ್ಯರಾತ್ರಿ ಸ್ನಾನಾದಿಗಳನ್ನು ಪೂರೈಸಿಕೊಂಡು, ಗದ್ದುಗೆಗೆ ನಮಿಸಿದ ಭಕ್ತರು, ಗೋಧಿ ಹಿಟ್ಟಿನಿಂದ ಸಿದ್ಧಪಡಿಸಿದ ದೀಪಗಳನ್ನು ತಲೆಯ ಮೇಲೆ ಹೊತ್ತು ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಿ ಹರಕೆ ಸಲ್ಲಿಸಿ ಪುನೀತರಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಚಿತ್ತಾಪುರ ತಾಲ್ಲೂಕಿನ ನಾಲವಾರದ ಕೋರಿಸಿದ್ದೇಶ್ವರ ಸಂಸ್ಥಾನ ಮಠದಲ್ಲಿ ಗುರುವಾರ ತನಾರತಿ ಉತ್ಸವವು ಸಹಸ್ರಾರು ಭಕ್ತರ ಮಧ್ಯೆ ಭಕ್ತಿ ಭಾವದಿಂದ ನೆರವೇರಿತು.</p>.<p>ಅಕ್ಷಯತದಿಗೆ ಅಮಾವಾಸ್ಯೆಯ ಅಂಗವಾಗಿ ಕೋರಿಸಿದ್ದೇಶ್ವರರ ಕರ್ತೃ ಗದ್ದುಗೆಗೆ ವಿಶೇಷ ಪೂಜೆ, ರುದ್ರಾಭಿಷೇಕ ಮಾಡಲಾಯಿತು. ಪೀಠಾಧಿಪತಿ ಸಿದ್ದತೋಟೇಂದ್ರ ಶಿವಾಚಾರ್ಯರ ಸಾನ್ನಿಧ್ಯದಲ್ಲಿ ಹಲವು ಮಠಾಧೀಶರ ಸಮ್ಮುಖದಲ್ಲಿ ಮಾಸಿಕ ಶಿವಾನುಭವ ಚಿಂತನ, ಸಂಗೀತ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.</p>.<p>ಗುರುವಾರ ಬೆಳಿಗ್ಗೆ ಸಿದ್ದತೋಟೇಂದ್ರ ಶಿವಾಚಾರ್ಯರು ಪಾರಂಪರಿಕ ಉಡುಪು ಧರಿಸಿ ತನಾರತಿ ಉತ್ಸವದ ನೇತೃತ್ವ ವಹಿಸಿದ್ದರು. ಪುರವಂತಿಕೆ, ಪೂರ್ಣಕುಂಭ, ಬಾಜಾ-ಭಜಂತ್ರಿ, ವೈದಿಕರ ವೇದಘೋಷಗಳೊಂದಿಗೆ ಮಧ್ಯರಾತ್ರಿ ಪ್ರಾರಂಭವಾಗಿ ಬೆಳಗಿನ ಜಾವದ ವರೆಗೂ ನಡೆಯಿತು.</p>.<p>ಮಧ್ಯರಾತ್ರಿ ಸ್ನಾನಾದಿಗಳನ್ನು ಪೂರೈಸಿಕೊಂಡು, ಗದ್ದುಗೆಗೆ ನಮಿಸಿದ ಭಕ್ತರು, ಗೋಧಿ ಹಿಟ್ಟಿನಿಂದ ಸಿದ್ಧಪಡಿಸಿದ ದೀಪಗಳನ್ನು ತಲೆಯ ಮೇಲೆ ಹೊತ್ತು ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಿ ಹರಕೆ ಸಲ್ಲಿಸಿ ಪುನೀತರಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>