<p><strong>ಜೇವರ್ಗಿ:</strong> ‘ಸಾಮಾಜಿಕ ಸ್ವಾಸ್ಥ್ಯವೇ ತತ್ವಪದಗಳ ಜೀವಾಳ. ಸಮಾಜದ ಉನ್ನತಿಗೆ ಬೇಕಾದ ಮಾರ್ಗದರ್ಶನವನ್ನು ತತ್ವಪದಕಾರರು ಯಶಸ್ವಿಯಾಗಿ ನೀಡುತ್ತಾರೆ’ ಎಂದು ಕೆಕೆಆರ್ಡಿಬಿ ಅಧ್ಯಕ್ಷ, ಶಾಸಕ ಡಾ.ಅಜಯಸಿಂಗ್ ಹೇಳಿದರು.</p>.<p>ಪಟ್ಟಣದ ಎಪಿಎಂಸಿ ಆವರಣದಲ್ಲಿ ಗುರುವಾರ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಶರಣ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ವತಿಯಿಂದ ಪ್ರಥಮ ತತ್ವಪದಕಾರರ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಜೇವರ್ಗಿ ತಾಲ್ಲೂಕು ಅನೇಕ ಜನ ಶರಣರು, ಸಂತರು, ಸೂಫಿಗಳು, ತತ್ವಪದಕಾರರು ನೆಲೆಸಿದ ಪುಣ್ಯ ತಾಣವಾಗಿದ್ದು, ಇಂತಹ ಪುಣ್ಯದ ನೆಲದಲ್ಲಿ ಪ್ರಪ್ರಥಮ ತತ್ವಪದಕಾರರ ಸಮ್ಮೇಳನ ಆಯೋಜನೆ ಮಾಡಿರುವುದು ಸಂತಸದ ವಿಷಯವಾಗಿದೆ’ ಎಂದರು.</p>.<p>ಸಮ್ಮೇಳನದ ಅಧ್ಯಕ್ಷ ಶಖಾಪೂರ ತಪೋವನಮಠದ ಸಿದ್ದರಾಮ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು. ನೆಲೋಗಿ ಸಿದ್ದಲಿಂಗ ಸ್ವಾಮೀಜಿ, ಪಾಳಾದ ಗುರುಮೂರ್ತಿ ಶಿವಾಚಾರ್ಯರು ಸಾನಿದ್ಯ ವಹಿಸಿದ್ದರು.</p>.<p>ಶಿರಸಗಿಯ ಬಸವರಾಜ ಶರಣರು ಆಶಯ ನುಡಿಗಳನ್ನಾಡಿದರು. ಮಾಜಿ ಶಾಸಕರಾದ ರಾಜಕುಮಾರ ಪಾಟೀಲ, ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಕೇದಾರಲಿಂಗಯ್ಯ ಹಿರೇಮಠ, ಶಿವರಾಜ ಪಾಟೀಲ, ವಿಜಯಕುಮಾರ ತೇಗಲತಿಪ್ಪಿ, ಮಲ್ಲಿಕಾರ್ಜುನ ವಡ್ಡನಕೇರಿ ಸೇರಿದಂತೆ ಮತ್ತಿತರರು ಆಗಮಿಸಿದ್ದರು.</p>.<p>‘ಹಾಡಿತು ತಪೋವನ ಕೋಗಿಲೆ’ ಮತ್ತು ‘ತಪೋವನ ತತ್ವದರ್ಶನ’ ಕೃತಿಯನ್ನು ಕೇಂದ್ರೀಯ ವಿವಿ ಕುಲಸಚಿವ ಆರ್.ಆರ್.ಬಿರಾದಾರ ಬಿಡುಗಡೆ ಮಾಡಿದರು.</p>.<p>ಮಧ್ಯಾಹ್ನ ನಡೆದ ಪ್ರಥಮ ಗೋಷ್ಠಿಯಲ್ಲಿ ಸಾಹಿತಿ ಡಾ.ನಾಗೇಂದ್ರ ಮಸೂತಿ ಅಧ್ಯಕ್ಷತೆ, ಡಾ.ಧರ್ಮಣ್ಣ ಬಡಿಗೇರ, ಮಹಾಂತಗೌಡ ಪಾಟೀಲ ಸೊನ್ನ ಉಪನ್ಯಾಸ ನೀಡಿದರು. ದ್ವಿತೀಯ ಗೋಷ್ಠಿಯಲ್ಲಿ ಸಾಹಿತಿ ಶಿವರಾಜ ಪಾಟೀಲ ಅಧ್ಯಕ್ಷತೆ, ಚಿಂತಕ ಲಕ್ಷ್ಮೀಕಾಂತ ಮೋಹರೀರ ಆಶಯ ನುಡಿಗಳನ್ನಾಡಿದರು.</p>.<p>ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಚೌಡಾಪೂರದ ಮಹಾಂತ ಶಿವಾಚಾರ್ಯರು ಸಾನ್ನಿಧ್ಯ, ಗುವಿವಿ ಕುಲಸಚಿವ ಪ್ರೋ.ರಮೇಶ ಲಂಡನಕರ್ ಅಧ್ಯಕ್ಷತೆ ವಹಿಸಿದ್ದರು. ಚಿತ್ರನಟ ಚೇತನಕುಮಾರ, ಕರವೇ ಉತ್ತರ ಕರ್ನಾಟಕ ಅಧ್ಯಕ್ಷ ಶರಣು ಗದ್ದುಗೆ ಸಮಾರೋಪ ಭಾಷಣ ಮಾಡಿದರು.</p>.<p>ಇದೇ ಸಂದರ್ಭದಲ್ಲಿ ಬಸವಪಟ್ಟಣದ ಮರೆಪ್ಪ ಶರಣರು, ನಿವೃತ್ತ ಉಪ ತಹಶೀಲ್ದಾರ್ ಸಿದ್ಧಯ್ಯ ಮಠಪತಿ, ಸಂಶೋದಕ ಅಶೋಕ ದೊಮ್ಮಲೂರು ಸೇರಿದಂತೆ ವಿವಿಧ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p><strong>ಮೆರವಣಿಗೆ:</strong> ಪಟ್ಟಣದ ಹಳೆಯ ತಹಶೀಲ್ದಾರ್ ಕಚೇರಿಯಿಂದ ವೇದಿಕೆವರೆಗೆ ನಡೆದ ಸಮ್ಮೇಳನದ ಅಧ್ಯಕ್ಷ ಸಿದ್ದರಾಮ ಶಿವಾಚಾರ್ಯ ಸ್ವಾಮೀಜಿಯವರ ಅದ್ದೂರಿ ಮೆರವಣಿಗೆಯಲ್ಲಿ ಡೊಳ್ಳು, ಭಾಜಾ ಭಜಂತ್ರಿ ಸೇರಿದಂತೆ ಹಲವಾರು ಕಲಾ ತಂಡಗಳು ಭಾಗವಹಿಸಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೇವರ್ಗಿ:</strong> ‘ಸಾಮಾಜಿಕ ಸ್ವಾಸ್ಥ್ಯವೇ ತತ್ವಪದಗಳ ಜೀವಾಳ. ಸಮಾಜದ ಉನ್ನತಿಗೆ ಬೇಕಾದ ಮಾರ್ಗದರ್ಶನವನ್ನು ತತ್ವಪದಕಾರರು ಯಶಸ್ವಿಯಾಗಿ ನೀಡುತ್ತಾರೆ’ ಎಂದು ಕೆಕೆಆರ್ಡಿಬಿ ಅಧ್ಯಕ್ಷ, ಶಾಸಕ ಡಾ.ಅಜಯಸಿಂಗ್ ಹೇಳಿದರು.</p>.<p>ಪಟ್ಟಣದ ಎಪಿಎಂಸಿ ಆವರಣದಲ್ಲಿ ಗುರುವಾರ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಶರಣ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ವತಿಯಿಂದ ಪ್ರಥಮ ತತ್ವಪದಕಾರರ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಜೇವರ್ಗಿ ತಾಲ್ಲೂಕು ಅನೇಕ ಜನ ಶರಣರು, ಸಂತರು, ಸೂಫಿಗಳು, ತತ್ವಪದಕಾರರು ನೆಲೆಸಿದ ಪುಣ್ಯ ತಾಣವಾಗಿದ್ದು, ಇಂತಹ ಪುಣ್ಯದ ನೆಲದಲ್ಲಿ ಪ್ರಪ್ರಥಮ ತತ್ವಪದಕಾರರ ಸಮ್ಮೇಳನ ಆಯೋಜನೆ ಮಾಡಿರುವುದು ಸಂತಸದ ವಿಷಯವಾಗಿದೆ’ ಎಂದರು.</p>.<p>ಸಮ್ಮೇಳನದ ಅಧ್ಯಕ್ಷ ಶಖಾಪೂರ ತಪೋವನಮಠದ ಸಿದ್ದರಾಮ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು. ನೆಲೋಗಿ ಸಿದ್ದಲಿಂಗ ಸ್ವಾಮೀಜಿ, ಪಾಳಾದ ಗುರುಮೂರ್ತಿ ಶಿವಾಚಾರ್ಯರು ಸಾನಿದ್ಯ ವಹಿಸಿದ್ದರು.</p>.<p>ಶಿರಸಗಿಯ ಬಸವರಾಜ ಶರಣರು ಆಶಯ ನುಡಿಗಳನ್ನಾಡಿದರು. ಮಾಜಿ ಶಾಸಕರಾದ ರಾಜಕುಮಾರ ಪಾಟೀಲ, ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಕೇದಾರಲಿಂಗಯ್ಯ ಹಿರೇಮಠ, ಶಿವರಾಜ ಪಾಟೀಲ, ವಿಜಯಕುಮಾರ ತೇಗಲತಿಪ್ಪಿ, ಮಲ್ಲಿಕಾರ್ಜುನ ವಡ್ಡನಕೇರಿ ಸೇರಿದಂತೆ ಮತ್ತಿತರರು ಆಗಮಿಸಿದ್ದರು.</p>.<p>‘ಹಾಡಿತು ತಪೋವನ ಕೋಗಿಲೆ’ ಮತ್ತು ‘ತಪೋವನ ತತ್ವದರ್ಶನ’ ಕೃತಿಯನ್ನು ಕೇಂದ್ರೀಯ ವಿವಿ ಕುಲಸಚಿವ ಆರ್.ಆರ್.ಬಿರಾದಾರ ಬಿಡುಗಡೆ ಮಾಡಿದರು.</p>.<p>ಮಧ್ಯಾಹ್ನ ನಡೆದ ಪ್ರಥಮ ಗೋಷ್ಠಿಯಲ್ಲಿ ಸಾಹಿತಿ ಡಾ.ನಾಗೇಂದ್ರ ಮಸೂತಿ ಅಧ್ಯಕ್ಷತೆ, ಡಾ.ಧರ್ಮಣ್ಣ ಬಡಿಗೇರ, ಮಹಾಂತಗೌಡ ಪಾಟೀಲ ಸೊನ್ನ ಉಪನ್ಯಾಸ ನೀಡಿದರು. ದ್ವಿತೀಯ ಗೋಷ್ಠಿಯಲ್ಲಿ ಸಾಹಿತಿ ಶಿವರಾಜ ಪಾಟೀಲ ಅಧ್ಯಕ್ಷತೆ, ಚಿಂತಕ ಲಕ್ಷ್ಮೀಕಾಂತ ಮೋಹರೀರ ಆಶಯ ನುಡಿಗಳನ್ನಾಡಿದರು.</p>.<p>ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಚೌಡಾಪೂರದ ಮಹಾಂತ ಶಿವಾಚಾರ್ಯರು ಸಾನ್ನಿಧ್ಯ, ಗುವಿವಿ ಕುಲಸಚಿವ ಪ್ರೋ.ರಮೇಶ ಲಂಡನಕರ್ ಅಧ್ಯಕ್ಷತೆ ವಹಿಸಿದ್ದರು. ಚಿತ್ರನಟ ಚೇತನಕುಮಾರ, ಕರವೇ ಉತ್ತರ ಕರ್ನಾಟಕ ಅಧ್ಯಕ್ಷ ಶರಣು ಗದ್ದುಗೆ ಸಮಾರೋಪ ಭಾಷಣ ಮಾಡಿದರು.</p>.<p>ಇದೇ ಸಂದರ್ಭದಲ್ಲಿ ಬಸವಪಟ್ಟಣದ ಮರೆಪ್ಪ ಶರಣರು, ನಿವೃತ್ತ ಉಪ ತಹಶೀಲ್ದಾರ್ ಸಿದ್ಧಯ್ಯ ಮಠಪತಿ, ಸಂಶೋದಕ ಅಶೋಕ ದೊಮ್ಮಲೂರು ಸೇರಿದಂತೆ ವಿವಿಧ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p><strong>ಮೆರವಣಿಗೆ:</strong> ಪಟ್ಟಣದ ಹಳೆಯ ತಹಶೀಲ್ದಾರ್ ಕಚೇರಿಯಿಂದ ವೇದಿಕೆವರೆಗೆ ನಡೆದ ಸಮ್ಮೇಳನದ ಅಧ್ಯಕ್ಷ ಸಿದ್ದರಾಮ ಶಿವಾಚಾರ್ಯ ಸ್ವಾಮೀಜಿಯವರ ಅದ್ದೂರಿ ಮೆರವಣಿಗೆಯಲ್ಲಿ ಡೊಳ್ಳು, ಭಾಜಾ ಭಜಂತ್ರಿ ಸೇರಿದಂತೆ ಹಲವಾರು ಕಲಾ ತಂಡಗಳು ಭಾಗವಹಿಸಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>