‘ಗಾಂಧಿ ಜಯಂತಿ ಕಾರ್ಯಕ್ರಮ ಆಚರಿಸಲು ಶಾಲೆಯನ್ನು ಸ್ವಚ್ಛಗೊಳಿಸಲು ಉದ್ದೇಶಿಸಲಾಗಿತ್ತು. ಈ ಸಂದರ್ಭದಲ್ಲಿ ಹೇಳಿದಷ್ಟು ಸ್ವಚ್ಛತಾ ಕೆಲಸ ಮಾಡಲಿಲ್ಲ ಎಂಬ ಕೋಪದಿಂದ ದೈಹಿಕ ಶಿಕ್ಷಣ ಶಿಕ್ಷಕ, ತನ್ನ ಮೇಲೆ ಹಲ್ಲೆ ಮಾಡಿದ್ದಾರೆ’ ಎಂದು ಎಸ್ಸೆಸ್ಸೆಲ್ಸಿ ಓದುತ್ತಿರುವ ವಿದ್ಯಾರ್ಥಿನಿ ದೂರಿರುವ ವಿಡಿಯೊ ವೈರಲ್ ಆಗಿದೆ.