ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ತಾಪುರ: ಸ್ವಾಮೀಜಿ ಆಪ್ತ ಸಹಾಯಕನ ಪತ್ನಿ ಮಠದ ಬಾವಿಯಲ್ಲಿ ಬಿದ್ದು ಸಾವು

Last Updated 26 ಮಾರ್ಚ್ 2022, 4:41 IST
ಅಕ್ಷರ ಗಾತ್ರ

ಚಿತ್ತಾಪುರ: ತಾಲ್ಲೂಕಿನ ದಿಗ್ಗಾಂವ ಗ್ರಾಮದ ಪಂಚಗೃಹ ಹಿರೇಮಠದ ಆವರಣದಲ್ಲಿರುವ ಬಾವಿಯಲ್ಲಿ ಬಿದ್ದು, ಶುಕ್ರವಾರ ಅತಿಥಿ ಶಿಕ್ಷಕಿಯೊಬ್ಬರು ಮೃತಪಟ್ಟಿದ್ದಾರೆ.

ಭೂಮಿಕಾ ಶರಣಪ್ಪ ಊಡಗಿ (26) ಮೃತ ಶಿಕ್ಷಕಿ.ದಿಗ್ಗಾಂವ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಅತಿಥಿ ಶಿಕ್ಷಕಿ ಆಗಿದ್ದರು. ಭೂಮಿಕಾ ಅವರು, ಹಿರೇಮಠದಪೀಠಾಧಿಪತಿ ಸಿದ್ಧವೀರ ಶಿವಾಚಾರ್ಯರ ಆಪ್ತಸಹಾಯಕರಾಗಿ ಕೆಲಸ ಮಾಡುತ್ತಿದ್ದ ಶರಣಪ್ಪ ಊಡಗಿ ಎಂಬುವವರ ಪತ್ನಿ ಎಂದು ತಿಳಿಸಲಾಗಿದೆ.

ಶುಕ್ರವಾರ ಮಧ್ಯಾಹ್ನ ಮನೆಯಿಂದ ಹೊರಹೋದ ಭೂಮಿಕಾ ವಾಪಸ್‌ ಬರಲಿಲ್ಲ. ಅತ್ತ ಶಾಲೆಗೂ ಹೋಗಿರಲಿಲ್ಲ. ಈ ಬಗ್ಗೆ ಮನೆಯಅಕ್ಕಪಕ್ಕದವರನ್ನು ವಿಚಾರಿಸಿದಾಗ, ಮಠದ ಹತ್ತಿರ ಹೋಗಿರುವ ವಿಷಯ ತಿಳಿಯಿತು. ಮಠದ ಆವರಣದಲ್ಲಿರುವ ಬಾವಿಯ ಬಳಿ ಅವರ ಚಪ್ಪಲಿಗಳು ಪತ್ತೆಯಾದವು. ಅಲ್ಲದೇ, ಬಾವಿಗೆ ಅಳವಡಿಡಿದ್ದತಂತಿ ಜಾಳಿಗೆ ಕೂಡ ತೆರೆದುಕೊಂಡಿತ್ತು. ಇದರಿಂದ ಅನುಮಾನಗೊಂಡು ಹುಡುಕಿದಾಗ, ಭೂಮಿಕಾ ಅವರ ಶವ ದೊರೆಯಿತು ಎಂದುಚಿತ್ತಾಪುರ ಪೊಲೀಸರು ಮಾಹಿತಿ ನೀಡಿದ್ದಾರೆ.

ಭೂಮಿಕಾ ಅವರ ತವರು ಮನೆಯವರು ಬರುವವರಿಗೆ ಕಾದುನೋಡಿದ ಪೊಲೀಸರು, ನಂತರ ಮರಣೋತ್ತರ ಪರೀಕ್ಷೆಗೆ ದಿಗ್ಗಾಂವದ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು. ನಂತರಬೀದರ್‌ ಜಿಲ್ಲೆಯ ಹಾರಕೂಡದಿಂದ ದಿಗ್ಗಾಂವ ಗ್ರಾಮಕ್ಕೆ ಬಂದ ಪಾಲಕರು ಮಗಳ ಶವ ಪಡೆದರು.

ಭೂಮಿಕಾ ಅವರಿಗೆ ಮದುವೆಯಾಗಿ ಆರು ವರ್ಷವಾಗಿದೆ. ಆದರೆ ಮಕ್ಕಳಾಗಿರಲಿಲ್ಲ.ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT