ಶುಕ್ರವಾರ ಮಧ್ಯಾಹ್ನ ಮನೆಯಿಂದ ಹೊರಹೋದ ಭೂಮಿಕಾ ವಾಪಸ್ ಬರಲಿಲ್ಲ. ಅತ್ತ ಶಾಲೆಗೂ ಹೋಗಿರಲಿಲ್ಲ. ಈ ಬಗ್ಗೆ ಮನೆಯಅಕ್ಕಪಕ್ಕದವರನ್ನು ವಿಚಾರಿಸಿದಾಗ, ಮಠದ ಹತ್ತಿರ ಹೋಗಿರುವ ವಿಷಯ ತಿಳಿಯಿತು. ಮಠದ ಆವರಣದಲ್ಲಿರುವ ಬಾವಿಯ ಬಳಿ ಅವರ ಚಪ್ಪಲಿಗಳು ಪತ್ತೆಯಾದವು. ಅಲ್ಲದೇ, ಬಾವಿಗೆ ಅಳವಡಿಡಿದ್ದತಂತಿ ಜಾಳಿಗೆ ಕೂಡ ತೆರೆದುಕೊಂಡಿತ್ತು. ಇದರಿಂದ ಅನುಮಾನಗೊಂಡು ಹುಡುಕಿದಾಗ, ಭೂಮಿಕಾ ಅವರ ಶವ ದೊರೆಯಿತು ಎಂದುಚಿತ್ತಾಪುರ ಪೊಲೀಸರು ಮಾಹಿತಿ ನೀಡಿದ್ದಾರೆ.