ಇದಕ್ಕೂ ಮುನ್ನ ಜೆಡಿಎಸ್ ಕಾರ್ಯಕರ್ತರು ತಮ್ಮ ಗ್ರಾಮಕ್ಕೆ ದರ್ಶನ್ ಭೇಟಿ ವಿರೋಧಿಸಿ ಘೋಷಣೆ ಕೂಗಿದ್ದರು. ಮತ್ತೊಂದೆಡೆ, ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ನಟನಿಗೆ ಅದ್ಧೂರಿ ಸ್ವಾಗತ ನೀಡಿದರು. ಎರಡೂ ಪಕ್ಷಗಳ ಕಾರ್ಯಕರ್ತರು ವಾಗ್ವಾದ ನಡೆಸಿದ್ದರಿಂದ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.