ಕೊರೊನಾ ಭಯವು ಪಾಲಕರಲ್ಲಿ ಇದೆ. ಇದರಿಂದ ಕೆಲ ಪಾಲಕರು ಮಕ್ಕಳಿಗೆ ಶಾಲೆಗೆ ಹೋಗಲು ನಿರಾಕರಿಸುತ್ತಿದ್ದಾರೆ. ನಾವೂ ಸಹ 1ನೇ, 2ನೇ ತರಗತಿ ಮಕ್ಕಳಿಗೆ ವಿನಾಯಿತಿ ನೀಡಿ ಹಿರಿಯ ತರಗತಿ ಮಕ್ಕಳಿಗೆ ಹೆಚ್ಚು ಆದ್ಯತೆ ನೀಡಲಾಗಿದೆ.ಓದು, ಬರಹ, ಸರಳ ಕಲಿಕಾ ಸಾಮರ್ಥ್ಯದ ಚಟುವಟಿಕೆ ಮಾತ್ರ ಕಲಿಸಲಾಗುತ್ತಿದೆ. ಕೊರೊನಾದ ಕುರಿತು ನಿಗದಿತ ಅಂತರ, ಸುರಕ್ಷತೆ, ಸ್ವಚ್ಛತೆ ಹಾಗೂ ಮಾಸ್ಕ್ ಧರಿಸುವ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಗುತ್ತಿದೆ ಎಂದು ಸಿಆರ್ಸಿ ಬಸವರಾಜ ರೋಳೆ ‘ಪ್ರಜಾವಾಣಿ’ಗೆ ತಿಳಿಸಿದರು.