ಇಷ್ಟು ದಿನ ದೇವಸ್ಥಾನದ ಪ್ರಧಾನ ಆರ್ಚಕ ವಿದ್ಯಾದಾಸ ಬಾಬಾ ದೇವಸ್ಥಾನದ ಉಸ್ತುವಾರಿಯನ್ನು ವಹಿಸಿಕೊಂಡಿದ್ದರು. ಆದರೆ ಪೂಜೆ ವಿಷಯಕ್ಕೆ ದೇವಸ್ಥಾನದ ಟ್ರಸ್ಟಿನ ಸದಸ್ಯರ ಹಾಗೂ ಬಾಬಾ ನಡುವೆ ಗಲಾಟೆಗಳು ನಡೆದು ಉಲ್ಬಣಗೊಳ್ಳುತ್ತಿದ್ದಂತೆ, ಜಿಲ್ಲಾಡಳಿತ ಮಧ್ಯಪ್ರವೇಶಿಸಿ ಕಳೆದ ವರ್ಷ ಜುಲೈನಲ್ಲಿ ಸರ್ಕಾರದ ಸುಪರ್ದಿಗೆ ಪಡೆದುಕೊಂಡಿತ್ತು.