ಮಧ್ಯಾಹ್ನದ 2ರ ನಂತರ ಕರ್ಫ್ಯೂ ಇದ್ದ ಕಾರಣ ಬಹುಪಾಲು ದೇವಸ್ಥಾನಗಳನ್ನು ಬಂದ್ ಮಾಡಲಾಯಿತು. ಬಿದ್ದಾಪುರ ಕಾಲೊನಿಯ ಕಾಶಿ ವಿಶ್ವನಾಥ ದೇವಸ್ಥಾನ, ರಾಘವೇಂದ್ರಸ್ವಾಮಿ ಮಠ, ಖೂಬಾ ಪ್ಲಾಟ್ನಲ್ಲಿರುವ ಶಿವಾಲಯ, ಲೋಹಾರ್ ಗಲ್ಲಿ, ಗೋದುತಾಯಿ ಕಾಲೊನಿ, ಶಹಾಬಜಾರ್, ಕೈಲಾಸ ನಗರ, ಗಂಗಾನಗರ, ರೇವಣಸಿದ್ಧೇಶ್ವರ ಕಾಲೊನಿ ಸೇರಿದಂತೆ ಎಲ್ಲ ಮಂದಿರಗಳಲ್ಲೂ ಬೆಳಿಗ್ಗೆ ಪ್ರವೇಶ ನೀಡಲಾಯಿತು. ಸಂಜೆಗೆ ಅರ್ಚಕರು ಪೂಜೆ ನೆರವೇರಿಸಿದರು.