ಕಲಬುರಗಿ: ಕೇಂದ್ರ ಭೂಸಾರಿಗೆ ಸಚಿವಾಲಯವು ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟದಿಂದ ರಾಜ್ಯದ ಕಲಬುರಗಿ, ಯಾದಗಿರಿ, ರಾಯಚೂರು ಮೂಲಕ ಆಂಧ್ರಪ್ರದೇಶದ ಕರ್ನೂಲ್ ಮಾರ್ಗವಾಗಿ ತಮಿಳುನಾಡಿನ ಚೆನ್ನೈ ಸಂಪರ್ಕಿಸುವ ಷಟ್ಪಥ (ಆರು ಲೇನ್) ಆರ್ಥಿಕ ಕಾರಿಡಾರ್ ನಿರ್ಮಾಣಕ್ಕೆ ಮುಂದಾಗಿದ್ದು, ಡಿ 2ರಂದುಜಾಗತಿಕ ಟೆಂಡರ್ ಕರೆಯಲಾಗಿದೆ.