ಗ್ರಾಮದ ಚಾವಡಿ ಕಟ್ಟೆಯಲ್ಲಿ ಕಳೆದ ಎರಡು ದಶಕಗಳಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಅದೇ ಸ್ಥಳದಲ್ಲಿ ಗಣೇಶ ಮಂದಿರ ನಿರ್ಮಾಣಕ್ಕೆ ಗ್ರಾಮದ ಅನೇಕರು ನಿರ್ಣಯಿಸಿ ಭಕ್ತರ ದೇಣಿಗೆಯ ನೆರವಿನಿಂದ ಮಂದಿರ ನಿರ್ಮಾಣ ಕಾರ್ಯ ಆರಂಭಿಸಿತ್ತು. ಆದರೆ, ಮುಸ್ಲಿಂ ಸಮುದಾಯದ ಕೆಲವರು ಗಣೇಶ ಮೂರ್ತಿ ಪ್ರತಿಷ್ಠಾಪನೆಯ ಕಟ್ಟಡಕ್ಕೆ ಸಂಬಂಧಪಟ್ಟಂತೆ ಕಟ್ಟಡ ಕಟ್ಟದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು.