<p><strong>ಕಲಬುರಗಿ</strong>: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಯನ್ನು ಬೆಳಿಗ್ಗೆ ನಗರದ 30 ಕೇಂದ್ರಗಳಲ್ಲಿ ಹಾಗೂ ಮಧ್ಯಾಹ್ನ 52 ಕೇಂದ್ರಗಳಲ್ಲಿ ಸಿ.ಸಿ ಟಿವಿ ಕ್ಯಾಮೆರಾ ಮತ್ತು ವೆಬ್ ಕಾಸ್ಟಿಂಗ್ ಕಣ್ಗಾವಲಿನಲ್ಲಿ ವ್ಯವಸ್ಥಿತವಾಗಿ ನಡೆಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಕ್ರೆಪ್ಪಗೌಡ ಜಿ.ಬಿರಾದಾರ ತಿಳಿಸಿದರು.</p>.<p>ಬೆಳಿಗ್ಗೆ ನಡೆದ ಪರೀಕ್ಷೆಗೆ(ಪತ್ರಿಕೆ–1ಕ್ಕೆ) ಒಟ್ಟು 8,706 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 970 ಜನ ಗೈರಾಗಿದ್ದು, 7,736 ಅಭ್ಯರ್ಥಿಗಳು ಪರೀಕ್ಷೆ ಬರೆದರು.</p>.<p>ಮಧ್ಯಾಹ್ನ ನಡೆದ ಪರೀಕ್ಷೆಗೆ(ಪತ್ರಿಕೆ–2ಕ್ಕೆ) 14,590 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 1,005 ಜನ ಗೈರಾದರೆ, 13,585 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಂದು ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಲ್ಯಾಪ್ಟಾಪ್ ಜೋಡಿಸಿ ಪರೀಕ್ಷಾ ಕೇಂದ್ರಗಳನ್ನು ಅವಲೋಕನ ಮಾಡಲು ವ್ಯವಸ್ಥೆ ಮಾಡಲಾಗಿತ್ತು. ಮೇಲುಸ್ತುವಾರಿಗಾಗಿ ಸಿಬ್ಬಂದಿಯನ್ನು ಕೂಡ ನೇಮಿಸಲಾಗಿತ್ತು ಎಂದು ಡಿಡಿಪಿಐ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಯನ್ನು ಬೆಳಿಗ್ಗೆ ನಗರದ 30 ಕೇಂದ್ರಗಳಲ್ಲಿ ಹಾಗೂ ಮಧ್ಯಾಹ್ನ 52 ಕೇಂದ್ರಗಳಲ್ಲಿ ಸಿ.ಸಿ ಟಿವಿ ಕ್ಯಾಮೆರಾ ಮತ್ತು ವೆಬ್ ಕಾಸ್ಟಿಂಗ್ ಕಣ್ಗಾವಲಿನಲ್ಲಿ ವ್ಯವಸ್ಥಿತವಾಗಿ ನಡೆಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಕ್ರೆಪ್ಪಗೌಡ ಜಿ.ಬಿರಾದಾರ ತಿಳಿಸಿದರು.</p>.<p>ಬೆಳಿಗ್ಗೆ ನಡೆದ ಪರೀಕ್ಷೆಗೆ(ಪತ್ರಿಕೆ–1ಕ್ಕೆ) ಒಟ್ಟು 8,706 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 970 ಜನ ಗೈರಾಗಿದ್ದು, 7,736 ಅಭ್ಯರ್ಥಿಗಳು ಪರೀಕ್ಷೆ ಬರೆದರು.</p>.<p>ಮಧ್ಯಾಹ್ನ ನಡೆದ ಪರೀಕ್ಷೆಗೆ(ಪತ್ರಿಕೆ–2ಕ್ಕೆ) 14,590 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 1,005 ಜನ ಗೈರಾದರೆ, 13,585 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಂದು ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಲ್ಯಾಪ್ಟಾಪ್ ಜೋಡಿಸಿ ಪರೀಕ್ಷಾ ಕೇಂದ್ರಗಳನ್ನು ಅವಲೋಕನ ಮಾಡಲು ವ್ಯವಸ್ಥೆ ಮಾಡಲಾಗಿತ್ತು. ಮೇಲುಸ್ತುವಾರಿಗಾಗಿ ಸಿಬ್ಬಂದಿಯನ್ನು ಕೂಡ ನೇಮಿಸಲಾಗಿತ್ತು ಎಂದು ಡಿಡಿಪಿಐ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>