ಆಳಂದ: ‘ರಾಘವ ಚೈತನ್ಯ ಶಿವಲಿಂಗದ ದರ್ಶನಕ್ಕಾಗಿ ಕೈಗೊಂಡ ರಥಯಾತ್ರೆಗೆ ಹೈಕೋರ್ಟ್ ಅನುಮತಿ ನೀಡಿದರೂ ರಾಜ್ಯ ಕಾಂಗ್ರೆಸ್ ಸರ್ಕಾರ ವಿಳಂಬ ಮಾಡುತ್ತಿದೆ’ ಎಂದು ಬಿಜೆಪಿ ಮುಖಂಡ ಹರ್ಷಾನಂದ ಗುತ್ತೇದಾರ ಆರೋಪಿಸಿದರು.
ತಾಲ್ಲೂಕಿನ ಮಾಡಿಯಾಳ ಗ್ರಾಮದಲ್ಲಿ ಭಾನುವಾರ ಹಿಂದೂ ಜಾಗರಣಾ ವೇದಿಕೆ ಹಾಗೂ ರಾಘವ ಚೈತನ್ಯ ಶಿವಲಿಂಗದ ಜೀರ್ಣೋದ್ದಾರ ಸಮಿತಿ ನೇತೃತ್ವದಲ್ಲಿ ಹಮ್ಮಿಕೊಂಡ ರಾಘವಚೈತನ್ಯ ಶಿವಲಿಂಗ ರಥಯಾತ್ರೆ ಉದ್ದೇಶಿಸಿ ಮಾತನಾಡಿದರು.
‘ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಶಿವಲಿಂಗದ ಪೂಜೆ, ದರ್ಶನಕ್ಕೆ ಅನುಮತಿ ನೀಡಲಾಗಿತ್ತು, ಆದರೆ ಈಗ ಪೂಜೆ ಕೈಗೊಳ್ಳಲು ಅನುಮತಿಗೆ ವಿಳಂಬ ಮಾಡಲಾಗುತ್ತಿದೆ’ ಎಂದರು.
ಮಾಡಿಯಾಳದ ಮರುಳಸಿದ್ದ ಸ್ವಾಮೀಜಿ ಮಾತನಾಡಿದರು.
ಮಾಡಿಯಾಳದ ಸೋಮಶೇಖರ ಒಡೆಯರ, ಹಿಂದೂ ಜಾಗರಣ ವೇದಿಕೆ ಸಂಚಾಲಕ ನಾಗೇಂದ್ರ ಕಬಾಡೆ, ಆನಂದರಾವ ಪಾಟೀಲ, ಮಲ್ಲಿಕಾರ್ಜುನ ತಡಕಲ, ಶರಣಗೌಡ ಪಾಟೀಲ, ನಿಂಗಣ್ಣಾ ಕಂಬಾರ, ಪ್ರಭು ಸರಸಂಬಿ ಉಪಸ್ಥಿತರಿದ್ದರು.
ಆಳಂದ ತಾಲ್ಲೂಕಿನ ಮಾಡಿಯಾಳ ಗ್ರಾಮದಲ್ಲಿ ಹಿಂದೂ ಜಾಗರಣ ವೇದಿಕೆ ನೇತೃತವದಲ್ಲಿ ರಾಘವ ಚೈತನ್ಯ ರಥಯಾತ್ರೆಯು ಜರುಗಿತು.