<p><strong>ಕಲಬುರಗಿ:</strong> ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮೊಬೈಲ್ ಹಾಗೂ ಚಿನ್ನಾಭರಣ ಕಳವು ಮಾಡಿದ ಸಂಬಂಧ ಆರು ಮಂದಿ ಆರೋಪಿಗಳನ್ನು ಬಂಧಿಸಿದ ಪೊಲೀಸರು, ಅವರಿಂದ ಸ್ವತ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.</p>.<p>ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವತಿಯಿಂದ ಮೊಬೈಲ್ ಕಸಿದು ಪರಾರಿಯಾಗಿದ್ದ ಫಿರೋಜ್ ಮಹಮದ್ ಶೇಖ್ (22) ಹಾಗೂ ಶೇಖ್ ಅಮನ್ (19) ಎಂಬುವವರನ್ನು ಬಂಧಿಸಲಾಗಿದೆ. ಅವರಿಂದ ₹ 17 ಸಾವಿರ ಮೌಲ್ಯದ ಮೊಬೈಲ್ ಜಪ್ತಿ ಮಾಡಲಾಗಿದೆ.</p>.<p>ಬ್ರಹ್ಮಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ, ಮೊಬೈಲ್ ಕಸಿದುಕೊಂಡು ಮೂವರು ಪರಾರಿಯಾಗಿದ್ದರು. ಈ ಮೂವರ ಪೈಕಿ ಶೇಖ್ ಜುನೈದ್ ಹಾಗೂ ಮಹಮದ್ ಪರ್ವೇಜ್ ಅವರನ್ನು ಬಂಧಿಸಿ, ಮೊಬೈಲ್ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ಅನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಬಸ್ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗ್ನಿಂದ 40 ಗ್ರಾಂ ಚಿನ್ನಾಭರಣ ಕದ್ದ ಸಂಬಂಧ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಶಕೀಲಾಬಾಯಿ (57) ಹಾಗೂ ಲಕ್ಷ್ಮಿ ಭೀಮಾ ಸಕಟ (30) ಎಂಬುವವರನ್ನು ಬಂಧಿಸಿ, ₹ 2.48 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ.</p>.<p><strong>ಸರಕು ವಾಹನ ಕಳವು:</strong> ನಗರದ ಹೋಟೆಲ್ವೊಂದರ ಸಮೀಪದಲ್ಲಿ ಸರಕು ವಾಹನ ನಿಲ್ಲಿಸಿ, ಉಪಾಹಾರ ಮಾಡಿ ವಾಪಸ್ ಬರುವಷ್ಟರಲ್ಲಿ ವಾಹನ ಕದ್ದೊಯ್ದ ಘಟನೆ ನಡೆದಿದೆ.</p>.<p>ಆಳಂದ ತಾಲ್ಲೂಕಿನ ಕಮಲಾನಗರದ ಸಂತೋಷ ವಿಠಲ ಅವರಿಗೆ ಸೇರಿದ ₹ 4.51 ಲಕ್ಷ ಮೌಲ್ಯದ ಟಾಟಾ ಏಸ್ ಸರಕು ವಾಹನ ಕಳುವಾಗಿದೆ. ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮೊಬೈಲ್ ಹಾಗೂ ಚಿನ್ನಾಭರಣ ಕಳವು ಮಾಡಿದ ಸಂಬಂಧ ಆರು ಮಂದಿ ಆರೋಪಿಗಳನ್ನು ಬಂಧಿಸಿದ ಪೊಲೀಸರು, ಅವರಿಂದ ಸ್ವತ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.</p>.<p>ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವತಿಯಿಂದ ಮೊಬೈಲ್ ಕಸಿದು ಪರಾರಿಯಾಗಿದ್ದ ಫಿರೋಜ್ ಮಹಮದ್ ಶೇಖ್ (22) ಹಾಗೂ ಶೇಖ್ ಅಮನ್ (19) ಎಂಬುವವರನ್ನು ಬಂಧಿಸಲಾಗಿದೆ. ಅವರಿಂದ ₹ 17 ಸಾವಿರ ಮೌಲ್ಯದ ಮೊಬೈಲ್ ಜಪ್ತಿ ಮಾಡಲಾಗಿದೆ.</p>.<p>ಬ್ರಹ್ಮಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ, ಮೊಬೈಲ್ ಕಸಿದುಕೊಂಡು ಮೂವರು ಪರಾರಿಯಾಗಿದ್ದರು. ಈ ಮೂವರ ಪೈಕಿ ಶೇಖ್ ಜುನೈದ್ ಹಾಗೂ ಮಹಮದ್ ಪರ್ವೇಜ್ ಅವರನ್ನು ಬಂಧಿಸಿ, ಮೊಬೈಲ್ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ಅನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಬಸ್ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗ್ನಿಂದ 40 ಗ್ರಾಂ ಚಿನ್ನಾಭರಣ ಕದ್ದ ಸಂಬಂಧ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಶಕೀಲಾಬಾಯಿ (57) ಹಾಗೂ ಲಕ್ಷ್ಮಿ ಭೀಮಾ ಸಕಟ (30) ಎಂಬುವವರನ್ನು ಬಂಧಿಸಿ, ₹ 2.48 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ.</p>.<p><strong>ಸರಕು ವಾಹನ ಕಳವು:</strong> ನಗರದ ಹೋಟೆಲ್ವೊಂದರ ಸಮೀಪದಲ್ಲಿ ಸರಕು ವಾಹನ ನಿಲ್ಲಿಸಿ, ಉಪಾಹಾರ ಮಾಡಿ ವಾಪಸ್ ಬರುವಷ್ಟರಲ್ಲಿ ವಾಹನ ಕದ್ದೊಯ್ದ ಘಟನೆ ನಡೆದಿದೆ.</p>.<p>ಆಳಂದ ತಾಲ್ಲೂಕಿನ ಕಮಲಾನಗರದ ಸಂತೋಷ ವಿಠಲ ಅವರಿಗೆ ಸೇರಿದ ₹ 4.51 ಲಕ್ಷ ಮೌಲ್ಯದ ಟಾಟಾ ಏಸ್ ಸರಕು ವಾಹನ ಕಳುವಾಗಿದೆ. ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>