ಕಲಬುರ್ಗಿ: ಜಿಲ್ಲೆಯ ವಾಡಿ ಸಮೀಪದ ಲಾಡ್ಲಾಪುರದ ಹಾಜಿ ಸರ್ವರ್ ದರ್ಗಾದಲ್ಲಿದ್ದ ಹಣ ಕಳ್ಳತನ ಮಾಡಿಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಗ್ರಾಮಸ್ಥರು ಹಿಡಿಯಲು ಹೋದಾಗ ಹಣ ಅಲ್ಲಿಯೇ ಬಿಟ್ಟು ಓಡಿ ಹೋಗಿದ್ದಾನೆ.
ಹಣ ಕಳ್ಳತನ ಮಾಡಿಕೊಂಡು ಹಲಕರ್ಟಿ ಗ್ರಾಮದ ಮೂಲಕ ಓಡಿ ಹೋಗುತ್ತಿದ್ದ ವ್ಯಕ್ತಿಯನ್ನು ಗ್ರಾಮಸ್ಥರು ಹಿಡಿಯಲು ಹೋದರು. ಇದರಿಂದ ಗಾಬರಿಯಾದ ವ್ಯಕ್ತಿ ಹಣವನ್ನು ಅಲ್ಲಿಯೇ ಬಿಟ್ಟು ಓಡಿ ಹೋಗಿದ್ದಾನೆ.
ಘಟನಾ ಸ್ಥಳಕ್ಕೆ ಡಿವೈಎಸ್ಪಿ ಉಮೇಶ ಚಿಕ್ಕಮಠ, ವಾಡಿ ಪಿಎಸ್ಐ ವಿಜಯಕುಮಾರ ಭಾವಗಿ ಭೇಟಿ ಆರೋಪಿ ಪತ್ತೆಗೆ ಮುಂದಾಗಿದ್ದಾರೆ.