<p><strong>ಚಿತ್ತಾಪುರ:</strong> ಪಟ್ಟಣದ ವೆಂಕಟೇಶ್ವರ ಬಡಾವಣೆಯಲ್ಲಿ ಭಾನುವಾರ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ ನಡೆದಿದೆ.</p>.<p>ಗುರುನಾಥ ಹಿಟ್ಟಿನ ಗಿರಿಣಿಯವರ ಮನೆಯಲ್ಲಿದ್ದ 20 ಗ್ರಾಂ ಬಂಗಾರ, 150 ಗ್ರಾಂ ಬೆಳ್ಳಿ ಹಾಗೂ ₹10 ಸಾವಿರ ನಗದು ಕಳ್ಳತನವಾಗಿದೆ.</p>.<p>ಇದೇ ಬಡಾವಣೆಯಲ್ಲಿನ ಧೂಳಯ್ಯ ಸ್ವಾಮಿ ಎನ್ನುವವರ ಮನೆಯಲ್ಲಿದ್ದ 30 ಗ್ರಾಂ ಬಂಗಾರ, 90 ಗ್ರಾಂ ಬೆಳ್ಳಿ ಹಾಗೂ ₹30 ಸಾವಿರ ನಗದು ಕಳ್ಳತನವಾಗಿದೆ. ಶಂಕರ ಕೊಳಕೂರ್ ಎನ್ನುವವರ ಮನೆಯ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ್ದಾರೆ.</p>.<p>ಗುರುನಾಥ ಹಿಟ್ಟಿನ ಗಿರಣಿಯವರು ಶುಕ್ರವಾರ ಬೆಂಗಳೂರಿಗೆ ಹೋಗಿ ಮರಳಿ ಸೋಮವಾರ ಬೆಳಗಿನ ಜಾವ 5 ಗಂಟೆಗೆ ಮನೆಗೆ ಬಂದು ನೋಡಿದಾಗ ಕಳ್ಳತನವಾಗಿದ್ದು ಬೆಳಕಿಗೆ ಬಂದಿದೆ. ಧೂಳಯ್ಯಸ್ವಾಮಿ ಅವರು ಕಾಳಗಿ ತಾಲ್ಲೂಕಿನ ರಟಕಲ್ಗೆ ಹೋದಾಗ ಮನೆ ಕಳ್ಳತನವಾಗಿದೆ.</p>.<p>ಸುದ್ದಿ ತಿಳಿಯುತ್ತಿದ್ದಂತೆ ಸಿಪಿಐ ಚಂದ್ರಶೇಖರ ತಿಗಡಿ, ಪಿಎಸ್ಐ ಶ್ರೀಶೈಲ ಅಂಬಾಟಿ, ಕ್ರೈಂ ಪಿಎಸ್ಐ ಚಂದ್ರಾಮಪ್ಪ, ಸಿಬ್ಬಂದಿ ಲಾಲ್ ಅಹ್ಮದ್, ದತ್ತು ಜಾನೆ, ಬೆರಳಚ್ಚು ತಜ್ಞರು ಹಾಗೂ ಶ್ವಾನ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ತಾಪುರ:</strong> ಪಟ್ಟಣದ ವೆಂಕಟೇಶ್ವರ ಬಡಾವಣೆಯಲ್ಲಿ ಭಾನುವಾರ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ ನಡೆದಿದೆ.</p>.<p>ಗುರುನಾಥ ಹಿಟ್ಟಿನ ಗಿರಿಣಿಯವರ ಮನೆಯಲ್ಲಿದ್ದ 20 ಗ್ರಾಂ ಬಂಗಾರ, 150 ಗ್ರಾಂ ಬೆಳ್ಳಿ ಹಾಗೂ ₹10 ಸಾವಿರ ನಗದು ಕಳ್ಳತನವಾಗಿದೆ.</p>.<p>ಇದೇ ಬಡಾವಣೆಯಲ್ಲಿನ ಧೂಳಯ್ಯ ಸ್ವಾಮಿ ಎನ್ನುವವರ ಮನೆಯಲ್ಲಿದ್ದ 30 ಗ್ರಾಂ ಬಂಗಾರ, 90 ಗ್ರಾಂ ಬೆಳ್ಳಿ ಹಾಗೂ ₹30 ಸಾವಿರ ನಗದು ಕಳ್ಳತನವಾಗಿದೆ. ಶಂಕರ ಕೊಳಕೂರ್ ಎನ್ನುವವರ ಮನೆಯ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ್ದಾರೆ.</p>.<p>ಗುರುನಾಥ ಹಿಟ್ಟಿನ ಗಿರಣಿಯವರು ಶುಕ್ರವಾರ ಬೆಂಗಳೂರಿಗೆ ಹೋಗಿ ಮರಳಿ ಸೋಮವಾರ ಬೆಳಗಿನ ಜಾವ 5 ಗಂಟೆಗೆ ಮನೆಗೆ ಬಂದು ನೋಡಿದಾಗ ಕಳ್ಳತನವಾಗಿದ್ದು ಬೆಳಕಿಗೆ ಬಂದಿದೆ. ಧೂಳಯ್ಯಸ್ವಾಮಿ ಅವರು ಕಾಳಗಿ ತಾಲ್ಲೂಕಿನ ರಟಕಲ್ಗೆ ಹೋದಾಗ ಮನೆ ಕಳ್ಳತನವಾಗಿದೆ.</p>.<p>ಸುದ್ದಿ ತಿಳಿಯುತ್ತಿದ್ದಂತೆ ಸಿಪಿಐ ಚಂದ್ರಶೇಖರ ತಿಗಡಿ, ಪಿಎಸ್ಐ ಶ್ರೀಶೈಲ ಅಂಬಾಟಿ, ಕ್ರೈಂ ಪಿಎಸ್ಐ ಚಂದ್ರಾಮಪ್ಪ, ಸಿಬ್ಬಂದಿ ಲಾಲ್ ಅಹ್ಮದ್, ದತ್ತು ಜಾನೆ, ಬೆರಳಚ್ಚು ತಜ್ಞರು ಹಾಗೂ ಶ್ವಾನ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>