ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೂರದರ್ಶನ ಕೇಂದ್ರ ಸ್ಥಳಾಂತರ ಇಲ್ಲ: ಪ್ರಸಾರ ಭಾರತಿ ಸ್ಪಷ್ಟನೆ

Last Updated 24 ಸೆಪ್ಟೆಂಬರ್ 2021, 3:21 IST
ಅಕ್ಷರ ಗಾತ್ರ

ಕಲಬುರ್ಗಿ: ‘ಇಲ್ಲಿನ ದೂರದರ್ಶನ ಕೇಂದ್ರವನ್ನು ಬೇರೆಡೆ ಸ್ಥಳಾಂತರಿಸಲಾಗುತ್ತಿದೆ ಎನ್ನುವುದು ಸುಳ್ಳು ಸುದ್ದಿ. ಇಂಥ ಯಾವುದೇ ಪ್ರಯತ್ನ ಸರ್ಕಾರದಿಂದ ನಡೆದಿಲ್ಲ. ನಾನು ಖುದ್ದಾಗಿ ದೆಹಲಿಯಲ್ಲಿ ಪ್ರಸಾರ ಭಾರತಿಯ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಕಲಬುರ್ಗಿ ದೂರದರ್ಶನ ಕೇಂದ್ರವು ಮುಂದುವರಿಯಲಿದೆ. ಜನರು ಗೊಂದಲಗಳಿಗೆ ಕಿವಿಗೊಡಬಾರದು’ ಎಂದು ಸಂಸದ ಡಾ.ಉಮೇಶ ಜಾಧವ ಸ್ಪಷ್ಟಪಡಿಸಿದ್ದಾರೆ.

‘ಕಳೆದ ಕೆಲವು ದಿನಗಳಿಂದ ದೂರದರ್ಶನ ಕೇಂದ್ರವನ್ನು ಎತ್ತಂಗಡಿ ಮಾಡಲಾಗುತ್ತಿದೆ ಎಂದು ವಿರೋಧಿಗಳು ಅಪಪ್ರಚಾರ ಮಾಡುತ್ತಿದ್ದಾರೆ. ಇಂಥ ಪ್ರಸ್ತಾವ ಇಲ್ಲ ಎಂದು ಸ್ವತಃ ಹಿರಿಯ ಅಧಿಕಾರಿಗಳೇ ಸ್ಪಷ್ಟಪಡಿಸಿದ್ದಾರೆ’ ಎಂದಿದ್ದಾರೆ.

‘ಈ ಬಗ್ಗೆ ದೂರದರ್ಶನ ಹಾಗೂ ಅಲ್‌ ಇಂಡಿಯಾ ರೇಡಿಯೊದ ಪ್ರಾದೇಶಿಕ ವ್ಯವಸ್ಥಾಪಕ ನಿರ್ದೇಶಕರಾದ ವಿ.ರಮಾಕಾಂತ ಅವರೊಂದಿಗೂ ನಾನು ಮಾತನಾಡಿದ್ದೇನೆ. ಕಲಬುರ್ಗಿಯ ದೂರದರ್ಶನ ಕೇಂದ್ರವನ್ನು ಈಗ ಡಿಜಿಟಲೀಕರಣ ಮಾಡಲಾಗುತ್ತಿದೆ. ವೈವಿಧ್ಯಮಯ ಕಾರ್ಯಕ್ರಮ ಪ್ರಸಾರಕ್ಕಾಗಿ ಈ ಭಾಗದ ಕೆಲವು ವಿಶ್ವವಿದ್ಯಾಲಯಗಳೊಂದಿಗೆ ಒಪ್ಪಂದ ಕೂಡ ಮಾಡಿಕೊಳ್ಳಲಾಗುತ್ತಿದೆ.

ಇಲ್ಲಿದ್ದ 29 ಸಿಬ್ಬಂದಿಯ ಪೈಕಿ ಇಬ್ಬರನ್ನು ಮಾತ್ರ ವರ್ಗಾವಣೆ ಮಾಡಲಾಗಿದೆ. ಆದರೆ, ಇನ್ನೂ 27 ಸಿಬ್ಬಂದಿ ಅಲ್ಲಿಯೇ ಇದ್ದಾರೆ. ಸಿಬ್ಬಂದಿ ವರ್ಗಾವಣೆ ಮಾಡಿದ ಕಾರಣಕ್ಕೆ ಇದು ಬಂದ್‌ ಆಗುತ್ತದೆ ಎಂದು ಯಾರೂ ಗೊಂದಲ ಮೂಡಿಸಿಕೊಳ್ಳಬಾರದು ಎಂಬುದಾಗಿ ಅವರು ಸ್ಪ‍ಷ್ಟಪಡಿಸಿದ್ದಾರೆ’ ಎಂದು ಸಂಸದ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT