ವಾರದ ಹಿಂದೆ ಗೌರವಧನವನ್ನು ಬಿಡುಗಡೆ ಮಾಡಲಾಗಿತ್ತು. ಮೊದಲೇ ಒಪ್ಪಿಕೊಂಡಂತೆ ₹ 10 ಸಾವಿರ ಲಂಚದ ಹಣವನ್ನು ನಗರದ ಚಂದ್ರಶೇಖರ ಪಾಟೀಲ ಜಿಲ್ಲಾ ಕ್ರೀಡಾಂಗಣದ ಎದುರಿಗೆ ಇರುವ ಅಂಗವಿಕಲರ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ತಲುಪಿಸುವ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವೆಂಕಟೇಶ ದೇಶಪಾಂಡೆ, ನಾನಾಗೌಡ ಹೊನ್ನಳ್ಳಿ ಹಾಗು ಅಮರೇಶ ನಾಯಕ ಎಂಬುವವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.