<p><strong>ಕಲಬುರಗಿ</strong>: ಇಲ್ಲಿನ ಅಂಬೇಡ್ಕರ್ ನಗರದ ಆಶ್ರಯ ಕಾಲೊನಿಯಲ್ಲಿ ಶುಕ್ರವಾರ ತಡರಾತ್ರಿ ಕಿಡಿಗೇಡಿಗಳು ಮೂರು ಬೈಕ್ಗಳಿಗೆ ಬೆಂಕಿ ಹಚ್ಚಿದ್ದಾರೆ. ಇದರಿಂದ ಮೂರೂ ಬೈಕ್ಗಳು ಸಂಪೂರ್ಣವಾಗಿ ಸುಟ್ಟಿವೆ.</p>.<p>ಆಶ್ರಯ ಕಾಲೊನಿಯಲ್ಲಿ ಹಲವರು ಹೊಸ ವರ್ಷಾಚರಣೆ ಆಯೋಜನೆ ಮಾಡಿದ್ದರು. ತಡರಾತ್ರಿ 1 ಗಂಟೆಯವರೆಗೂ ಅಲ್ಲಲ್ಲಿ ಹಾಡು, ಕುಣಿತ, ಸಂಭ್ರಮಗಳು ನಡೆದೇ ಇದ್ದವು. ಅಲ್ಲಿಯವರೆಗೂ ಮನೆಗಳ ಮುಂದೆ ನಿಲ್ಲಿಸಿದ್ದ ಈ ಬೈಕುಗಳಿಗೆ ಏನೂ ಆಗಿರಲಿಲ್ಲ. ಆ ನಂತರ ಮನೆಯವರೆಲ್ಲ ಮಲಗಿದ ವೇಳೆ ಕಡಿಗೇಡಿಗಳು ಬೈಕ್ಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ಇಲ್ಲಿನ ಅಂಬೇಡ್ಕರ್ ನಗರದ ಆಶ್ರಯ ಕಾಲೊನಿಯಲ್ಲಿ ಶುಕ್ರವಾರ ತಡರಾತ್ರಿ ಕಿಡಿಗೇಡಿಗಳು ಮೂರು ಬೈಕ್ಗಳಿಗೆ ಬೆಂಕಿ ಹಚ್ಚಿದ್ದಾರೆ. ಇದರಿಂದ ಮೂರೂ ಬೈಕ್ಗಳು ಸಂಪೂರ್ಣವಾಗಿ ಸುಟ್ಟಿವೆ.</p>.<p>ಆಶ್ರಯ ಕಾಲೊನಿಯಲ್ಲಿ ಹಲವರು ಹೊಸ ವರ್ಷಾಚರಣೆ ಆಯೋಜನೆ ಮಾಡಿದ್ದರು. ತಡರಾತ್ರಿ 1 ಗಂಟೆಯವರೆಗೂ ಅಲ್ಲಲ್ಲಿ ಹಾಡು, ಕುಣಿತ, ಸಂಭ್ರಮಗಳು ನಡೆದೇ ಇದ್ದವು. ಅಲ್ಲಿಯವರೆಗೂ ಮನೆಗಳ ಮುಂದೆ ನಿಲ್ಲಿಸಿದ್ದ ಈ ಬೈಕುಗಳಿಗೆ ಏನೂ ಆಗಿರಲಿಲ್ಲ. ಆ ನಂತರ ಮನೆಯವರೆಲ್ಲ ಮಲಗಿದ ವೇಳೆ ಕಡಿಗೇಡಿಗಳು ಬೈಕ್ಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>