ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ಬಾಲಕಿ, ಇಬ್ಬರು ಯುವಕರ ಸಾವು

ಬೈಕಿಗೆ ಅಪರಿಚಿತ ವಾಹನ ಡಿಕ್ಕಿ; ನಸುಕಿನಲ್ಲಿ ಸಂಭವಿಸಿದ ಅಪಘಾತ
Last Updated 12 ಜನವರಿ 2021, 3:06 IST
ಅಕ್ಷರ ಗಾತ್ರ

ವಾಡಿ (ಕಲಬುರ್ಗಿ ಜಿಲ್ಲೆ): ಚಿತ್ತಾಪುರ‌ ತಾಲ್ಲೂಕಿನ ವಾಡಿ ಸಮೀಪದ ರಾವೂರ ಹೊರವಲಯದಲ್ಲಿ ಸೋಮವಾರ ನಸುಕಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಬ್ಬ ಬಾಲಕಿ ಹಾಗೂ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

‘ರಾವೂರು ನಿವಾಸಿಗಳಾದ ಭೀಮಾಶಂಕರ ಸುಭಾಷ ಪ್ಯಾಟಿ (20), ಅಕ್ಬರ್ ಗೂಡು ಪಟೇಲ್ (19) ಹಾಗೂ ಭಾಗ್ಯಶ್ರೀ ಬಸವರಾಜ (14) ಮೃತಪಟ್ಟವರು. ಈ ಮೂವರೂ ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು. ನಸುಕಿನ 1 ಗಂಟೆ ಸುಮಾರಿಗೆ ಯಾವುದೋ ವಾಹನ ಬೈಕಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ಜಖಂಗೊಂಡಿದೆ. ಗಾಯಗೊಂಡ ಮೂವರೂ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ. ಬೆಳಿಗ್ಗೆ ಇತರ ವಾಹನಗಳು ಈ ದಾರಿಯಲ್ಲಿ ಬಂದಾಗ ಪ್ರಕರಣ ಗೊತ್ತಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ತಡರಾತ್ರಿಯಲ್ಲಿ ಈ ಮೂವರೂ ಎಲ್ಲಿಗೆ ಪ್ರಯಾಣ ಮಾಡುತ್ತಿದ್ದರು ಎಂಬ ಬಗ್ಗೆ ಪೊಲೀಸರಿ ಮಾಹಿತಿ ನೀಡಿಲ್ಲ. ವಾಡಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶವಗಳ ಪಂಚನಾಮೆ ನಡೆಸಿ, ಕುಟುಂಬದವರಿಗೆ ಹಸ್ತಾಂತರಿ ಸಲಾಯಿತು. ಆಸ್ಪತ್ರೆಯ ಮುಂದೆ ಮೃತರ ಕುಟುಂಬದವರು, ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT