<p><strong>ವಾಡಿ (ಕಲಬುರ್ಗಿ ಜಿಲ್ಲೆ): </strong>ಚಿತ್ತಾಪುರ ತಾಲ್ಲೂಕಿನ ವಾಡಿ ಸಮೀಪದ ರಾವೂರ ಹೊರವಲಯದಲ್ಲಿ ಸೋಮವಾರ ನಸುಕಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಬ್ಬ ಬಾಲಕಿ ಹಾಗೂ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>‘ರಾವೂರು ನಿವಾಸಿಗಳಾದ ಭೀಮಾಶಂಕರ ಸುಭಾಷ ಪ್ಯಾಟಿ (20), ಅಕ್ಬರ್ ಗೂಡು ಪಟೇಲ್ (19) ಹಾಗೂ ಭಾಗ್ಯಶ್ರೀ ಬಸವರಾಜ (14) ಮೃತಪಟ್ಟವರು. ಈ ಮೂವರೂ ಒಂದೇ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದರು. ನಸುಕಿನ 1 ಗಂಟೆ ಸುಮಾರಿಗೆ ಯಾವುದೋ ವಾಹನ ಬೈಕಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ಜಖಂಗೊಂಡಿದೆ. ಗಾಯಗೊಂಡ ಮೂವರೂ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ. ಬೆಳಿಗ್ಗೆ ಇತರ ವಾಹನಗಳು ಈ ದಾರಿಯಲ್ಲಿ ಬಂದಾಗ ಪ್ರಕರಣ ಗೊತ್ತಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ತಡರಾತ್ರಿಯಲ್ಲಿ ಈ ಮೂವರೂ ಎಲ್ಲಿಗೆ ಪ್ರಯಾಣ ಮಾಡುತ್ತಿದ್ದರು ಎಂಬ ಬಗ್ಗೆ ಪೊಲೀಸರಿ ಮಾಹಿತಿ ನೀಡಿಲ್ಲ. ವಾಡಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶವಗಳ ಪಂಚನಾಮೆ ನಡೆಸಿ, ಕುಟುಂಬದವರಿಗೆ ಹಸ್ತಾಂತರಿ ಸಲಾಯಿತು. ಆಸ್ಪತ್ರೆಯ ಮುಂದೆ ಮೃತರ ಕುಟುಂಬದವರು, ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಡಿ (ಕಲಬುರ್ಗಿ ಜಿಲ್ಲೆ): </strong>ಚಿತ್ತಾಪುರ ತಾಲ್ಲೂಕಿನ ವಾಡಿ ಸಮೀಪದ ರಾವೂರ ಹೊರವಲಯದಲ್ಲಿ ಸೋಮವಾರ ನಸುಕಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಬ್ಬ ಬಾಲಕಿ ಹಾಗೂ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>‘ರಾವೂರು ನಿವಾಸಿಗಳಾದ ಭೀಮಾಶಂಕರ ಸುಭಾಷ ಪ್ಯಾಟಿ (20), ಅಕ್ಬರ್ ಗೂಡು ಪಟೇಲ್ (19) ಹಾಗೂ ಭಾಗ್ಯಶ್ರೀ ಬಸವರಾಜ (14) ಮೃತಪಟ್ಟವರು. ಈ ಮೂವರೂ ಒಂದೇ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದರು. ನಸುಕಿನ 1 ಗಂಟೆ ಸುಮಾರಿಗೆ ಯಾವುದೋ ವಾಹನ ಬೈಕಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ಜಖಂಗೊಂಡಿದೆ. ಗಾಯಗೊಂಡ ಮೂವರೂ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ. ಬೆಳಿಗ್ಗೆ ಇತರ ವಾಹನಗಳು ಈ ದಾರಿಯಲ್ಲಿ ಬಂದಾಗ ಪ್ರಕರಣ ಗೊತ್ತಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ತಡರಾತ್ರಿಯಲ್ಲಿ ಈ ಮೂವರೂ ಎಲ್ಲಿಗೆ ಪ್ರಯಾಣ ಮಾಡುತ್ತಿದ್ದರು ಎಂಬ ಬಗ್ಗೆ ಪೊಲೀಸರಿ ಮಾಹಿತಿ ನೀಡಿಲ್ಲ. ವಾಡಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶವಗಳ ಪಂಚನಾಮೆ ನಡೆಸಿ, ಕುಟುಂಬದವರಿಗೆ ಹಸ್ತಾಂತರಿ ಸಲಾಯಿತು. ಆಸ್ಪತ್ರೆಯ ಮುಂದೆ ಮೃತರ ಕುಟುಂಬದವರು, ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>