ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಯಿ ಮಗ ಸೇರಿ ಮೂವರು ಸಾವು

ಮುದವಾಳ (ಕೆ) ಕ್ರಾಸ್ ಹತ್ತಿರ ಸ್ವಾಗತ ಕಮಾನಿಗೆ ಕಾರು ಡಿಕ್ಕಿ
Last Updated 16 ಸೆಪ್ಟೆಂಬರ್ 2020, 15:01 IST
ಅಕ್ಷರ ಗಾತ್ರ

ಜೇವರ್ಗಿ: ತಾಲ್ಲೂಕಿನ ಮುದವಾಳ (ಕೆ) ಕ್ರಾಸ್ ಹತ್ತಿರ ಬುಧವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ್ದು, ಒಬ್ಬರಿಗೆ ಗಂಭೀರ ಗಾಯವಾಗಿದೆ.

ಯಾದಗಿರಿ ಜಿಲ್ಲೆಯ ಸುರಪುರದಿಂದ ಕಲಬುರ್ಗಿ ನಗರಕ್ಕೆ ತೆರಳುತ್ತಿದ್ದಾಗ ಯಾದಗಿರಿ ಜಿಲ್ಲೆ ಸರಹದ್ದು ಮುಗಿದ ನಂತರ ಕಲಬುರ್ಗಿ ಜಿಲ್ಲೆಗೆ ಸ್ವಾಗತ ಕೋರುವ ಕಮಾನಿಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನ ಚಾಲಕ ರಮೇಶ ಹಣಮಂತರಾವ್ (40), ಅನಿತಾ ರಾಜಲಬಂಡಾ (42), ಅನಿತಾ ಪುತ್ರ ಹೇಮಂತ (18) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಅನಿತಾ ಪತಿ ಸಂತೋಷಕುಮಾರ ರಾಜಲಬಂಡಾಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಕಲಬುರ್ಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತೋಷಕುಮಾರ ಅವರು ಸುರಪುರ ತಾಲ್ಲೂಕಿನ ಪೇಠ ಅಮ್ಮಾಪುರ ಗ್ರಾಮದ ಸಗರನಾಡು ಅನುದಾನಿತ ಪ್ರೌಢಶಾಲೆಯಲ್ಲಿ ಸಹ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಪಘಾತಕ್ಕೀಡಾದವರು ಸುರಪುರ ಪಟ್ಟಣದ ಜಲಾಲ ಮೊಹಲ್ಲಾ ನಿವಾಸಿಗಳು. ಪುತ್ರ ಹೇಮಂತ ಅವರ ಪರೀಕ್ಷೆ ಕಲಬುರ್ಗಿಯಲ್ಲಿ ಇದ್ದುದರಿಂದ ಕಾರಿನಲ್ಲಿ ಸುರಪುರದಿಂದ ಕಲಬುರ್ಗಿಗೆ ಬರುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT