<p><strong>ಕಲಬುರ್ಗಿ:</strong> ಇಲ್ಲಿನ ಕಲಬುರ್ಗಿ-ಯಾದಗಿರಿ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿರುವ ಮಧ್ಯೆಯೇ ದಿಢೀರ್ ಬೆಳವಣಿಗೆಯಲ್ಲಿ ಕಾಂಗ್ರೆಸ್ ಬೆಂಬಲದಿಂದ ಆಯ್ಕೆಯಾದ ಮೂವರು ನಿರ್ದೇಶಕರನ್ನು ಅನರ್ಹಗೊಳಿಸಲಾಗಿದೆ.</p>.<p>ಸಹಕಾರ ಸಂಘಗಳ ಜಂಟಿ ನಿಬಂಧಕರು ನವೆಂಬರ್ 25ರಂದು ಈ ಆದೇಶ ಹೊರಡಿಸಿದ್ದಾರೆ. ಆದರೆ ಅದನ್ನು ಇನ್ನೂ ಅವರಿಗೆ ತಲುಪಿಸಿಲ್ಲ. ಅವರು ಬ್ಯಾಂಕಿಗೆ ಬಂದು ಹಾಜರಾತಿ ಪುಸ್ತಕಕ್ಕೆ ಸಹಿ ಹಾಕಬಹುದು. ಆದರೆ ಮತದಾನ ಮಾಡುವಂತಿಲ್ಲ.</p>.<p>ಏತನ್ಮಧ್ಯೆ ಸರ್ಕಾರದಿಂದ ಎರಡು ದಿನಗಳ ಹಿಂದೆಯಷ್ಟೇ ನಾಮನಿರ್ದೇಶನಗೊಂಡಿರುವ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ, ಸೇಡಂ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ಅವರು ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಸುರೇಶ ಸಜ್ಜನ ನಾಮಪತ್ರ ಸಲ್ಲಿಸಿದರು.</p>.<p>ಪ್ರಸ್ತುತ ಏಳು ಜನ ನಿರ್ದೇಶಕರು ಬ್ಯಾಂಕ್ ಆವರಣಕ್ಕೆ ಬಂದಿದ್ದು, ಇನ್ನೂ ಇಬ್ಬರು ನಿರ್ದೇಶಕರು ಬಂದರೆ ಚುನಾವಣೆ ನಡೆಯಲಿದೆ. ಇಲ್ಲದಿದ್ದರೆ ಮುಂದೂಡುವುದು ಅನಿವಾರ್ಯ ಎಂದು ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಿದಾನಂದ ನಿಂಬಾಳ ತಿಳಿಸಿದರು.</p>.<p>ಕಲಬುರ್ಗಿ ಉಪವಿಭಾಗಾಧಿಕಾರಿ ಬಲರಾಮ ಲಮಾಣಿ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.</p>.<p>ಕಾಂಗ್ರೆಸ್ ನಿರ್ದೇಶಕರಾದ ಸೋಮಶೇಖರ ಗೋನಾಯಕ, ಗೌತಮ ಪಾಟೀಲ, ಬಾಪುಗೌಡ ಪಾಟೀಲ ಅವರನ್ನು ಸಹಕಾರ ಸಂಘಗಳ ನಿಯಮ ಉಲ್ಲಂಘಿಸಿದ್ದಕ್ಕಾಗಿ ಮೂವರನ್ನು ಅಮಾನತುಗೊಳಿಸಲಾಗಿದೆ.</p>.<p>ನವೆಂಬರ್ 25ರಂದು ಆದೇಶ ಹೊರಡಿಸಿದ್ದರೂ ಇನ್ನೂ ಅವರಿಗೆ ಆದೇಶ ತಲುಪಿಸಿಲ್ಲ. ಇದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ಇಲ್ಲಿನ ಕಲಬುರ್ಗಿ-ಯಾದಗಿರಿ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿರುವ ಮಧ್ಯೆಯೇ ದಿಢೀರ್ ಬೆಳವಣಿಗೆಯಲ್ಲಿ ಕಾಂಗ್ರೆಸ್ ಬೆಂಬಲದಿಂದ ಆಯ್ಕೆಯಾದ ಮೂವರು ನಿರ್ದೇಶಕರನ್ನು ಅನರ್ಹಗೊಳಿಸಲಾಗಿದೆ.</p>.<p>ಸಹಕಾರ ಸಂಘಗಳ ಜಂಟಿ ನಿಬಂಧಕರು ನವೆಂಬರ್ 25ರಂದು ಈ ಆದೇಶ ಹೊರಡಿಸಿದ್ದಾರೆ. ಆದರೆ ಅದನ್ನು ಇನ್ನೂ ಅವರಿಗೆ ತಲುಪಿಸಿಲ್ಲ. ಅವರು ಬ್ಯಾಂಕಿಗೆ ಬಂದು ಹಾಜರಾತಿ ಪುಸ್ತಕಕ್ಕೆ ಸಹಿ ಹಾಕಬಹುದು. ಆದರೆ ಮತದಾನ ಮಾಡುವಂತಿಲ್ಲ.</p>.<p>ಏತನ್ಮಧ್ಯೆ ಸರ್ಕಾರದಿಂದ ಎರಡು ದಿನಗಳ ಹಿಂದೆಯಷ್ಟೇ ನಾಮನಿರ್ದೇಶನಗೊಂಡಿರುವ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ, ಸೇಡಂ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ಅವರು ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಸುರೇಶ ಸಜ್ಜನ ನಾಮಪತ್ರ ಸಲ್ಲಿಸಿದರು.</p>.<p>ಪ್ರಸ್ತುತ ಏಳು ಜನ ನಿರ್ದೇಶಕರು ಬ್ಯಾಂಕ್ ಆವರಣಕ್ಕೆ ಬಂದಿದ್ದು, ಇನ್ನೂ ಇಬ್ಬರು ನಿರ್ದೇಶಕರು ಬಂದರೆ ಚುನಾವಣೆ ನಡೆಯಲಿದೆ. ಇಲ್ಲದಿದ್ದರೆ ಮುಂದೂಡುವುದು ಅನಿವಾರ್ಯ ಎಂದು ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಿದಾನಂದ ನಿಂಬಾಳ ತಿಳಿಸಿದರು.</p>.<p>ಕಲಬುರ್ಗಿ ಉಪವಿಭಾಗಾಧಿಕಾರಿ ಬಲರಾಮ ಲಮಾಣಿ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.</p>.<p>ಕಾಂಗ್ರೆಸ್ ನಿರ್ದೇಶಕರಾದ ಸೋಮಶೇಖರ ಗೋನಾಯಕ, ಗೌತಮ ಪಾಟೀಲ, ಬಾಪುಗೌಡ ಪಾಟೀಲ ಅವರನ್ನು ಸಹಕಾರ ಸಂಘಗಳ ನಿಯಮ ಉಲ್ಲಂಘಿಸಿದ್ದಕ್ಕಾಗಿ ಮೂವರನ್ನು ಅಮಾನತುಗೊಳಿಸಲಾಗಿದೆ.</p>.<p>ನವೆಂಬರ್ 25ರಂದು ಆದೇಶ ಹೊರಡಿಸಿದ್ದರೂ ಇನ್ನೂ ಅವರಿಗೆ ಆದೇಶ ತಲುಪಿಸಿಲ್ಲ. ಇದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>