ತಾಲ್ಲೂಕಿನ ಪಟ್ಟಣ ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
‘ನನಗೆ ಪಕ್ಷ ಹಾಗೂ ಅದರ ಸಿದ್ಧಾಂತಗಳು ಮುಖ್ಯವಾಗಿವೆ. ಆದರೆ, ನಮ್ಮ ಪಕ್ಷದಿಂದ ಹೊರಗೆ ಹೋದವರು ಸಿದ್ಧಾಂತಗಳನ್ನು ಪಾಲಿಸದೆ ಈಗ ಸಂವಿಧಾನ ವಿರೋಧಿ ಪಕ್ಷದಲ್ಲಿ ಕೆಲಸ ಮಾಡುತ್ತಿರುವುದನ್ನು ನೋಡಿದರೆ ಅವರ ಜನಪರ ಕಾಳಜಿ ತಿಳಿಯುತ್ತದೆ’ ಎಂದು ವ್ಯಂಗ್ಯವಾಡಿದರು.