<p><strong>ಚಿಂಚೋಳಿ (ಕಲಬುರಗಿ): </strong>ದಕ್ಷಿಣ ಭಾರತದ ಏಕೈಕ ಶುಷ್ಕ ವಲಯದ ವನ್ಯಜೀವಿ ಧಾಮ ಎಂಬ ಹೆಗ್ಗಳಿಕೆ ಹೊಂದಿರುವ ಚಿಂಚೋಳಿ ವನ್ಯಜೀವಿ ಧಾಮದಲ್ಲಿ ಹುಲಿ ಗಣತಿ ಆರಂಭವಾಗಿದೆ.</p>.<p>‘14 ಗಸ್ತುಗಳಿದ್ದು, ಫೆ.28ವರೆಗೆ ಗಣತಿ ನಡೆಯಲಿದೆ. ಪ್ರತಿ ಗಸ್ತಿನಲ್ಲಿ 5 ಕಿ.ಮೀ. ಕಾಲ್ನಡಿಗೆ ಮೂಲಕ ಸಾಗಿ ಅಲ್ಲಿ ದೊರೆಯುವ ಮಾಂಸಾಹಾರಿ ಪ್ರಾಣಿಗಳ ಮಾಹಿತಿ ದಾಖಲಿಸಲಾಗುತ್ತಿದೆ. ಗಣತಿಯಲ್ಲಿ ವನ್ಯಜೀವಿಗಳ ಹೆಜ್ಜೆ ಗುರುತು, ಹಿಕ್ಕೆಗಳು, ಕಳೇಬರ, ನೆಲ ಹಾಗೂ ಮರ ಅಗೆದಿರುವ ಕುರಿತು ಮಾಹಿತಿ ದಾಖಲಿಸಲಾಗುತ್ತದೆ’ ಎಂದು ವಲಯ ಅರಣ್ಯಾಧಿಕಾರಿ ಸಂಜೀವಕುಮಾರ ಚವ್ಹಾಣ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>2 ಕಿ.ಮೀ ಉದ್ದದಲ್ಲಿ ಸುಣ್ಣದಿಂದ ರೇಖೆ ಹಾಕಿ ಅದರಲ್ಲಿ ವಿವಿಧ ವಿನ್ಯಾಸದ ವೃತ್ತ ಹಾಕಿ ಅದರಲ್ಲಿ ದೊರೆತ ಹಿಕ್ಕಿಗಳು, ಹುಲ್ಲು, ಸಸ್ಯ ಪ್ರಕಾರಗಳ ಮಾಹಿತಿ ದಾಖಲಿಸಲಾಗುತ್ತಿದೆ ಎಂದರು.</p>.<p>ಉಪ ವಲಯ ಅರಣ್ಯಾಧಿಕಾರಿಗಳಾದ ಸಿದ್ಧಾರೂಡ ಹೊಕ್ಕುಂಡಿ, ಭಾನುಪ್ರತಾಪಸಿಂಗ್, ಗಜಾನಂದ, ನಟರಾಜ ಹಾಗೂ ಅರಣ್ಯ ರಕ್ಷಕರಾದ ಶೇಖ ಅಮೇರ, ಮಾಳಪ್ಪ ಪೂಜಾರಿ, ಹಾಲೇಶ ಹಾಗೂ ಪ್ರಭು ಜಾಧವ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂಚೋಳಿ (ಕಲಬುರಗಿ): </strong>ದಕ್ಷಿಣ ಭಾರತದ ಏಕೈಕ ಶುಷ್ಕ ವಲಯದ ವನ್ಯಜೀವಿ ಧಾಮ ಎಂಬ ಹೆಗ್ಗಳಿಕೆ ಹೊಂದಿರುವ ಚಿಂಚೋಳಿ ವನ್ಯಜೀವಿ ಧಾಮದಲ್ಲಿ ಹುಲಿ ಗಣತಿ ಆರಂಭವಾಗಿದೆ.</p>.<p>‘14 ಗಸ್ತುಗಳಿದ್ದು, ಫೆ.28ವರೆಗೆ ಗಣತಿ ನಡೆಯಲಿದೆ. ಪ್ರತಿ ಗಸ್ತಿನಲ್ಲಿ 5 ಕಿ.ಮೀ. ಕಾಲ್ನಡಿಗೆ ಮೂಲಕ ಸಾಗಿ ಅಲ್ಲಿ ದೊರೆಯುವ ಮಾಂಸಾಹಾರಿ ಪ್ರಾಣಿಗಳ ಮಾಹಿತಿ ದಾಖಲಿಸಲಾಗುತ್ತಿದೆ. ಗಣತಿಯಲ್ಲಿ ವನ್ಯಜೀವಿಗಳ ಹೆಜ್ಜೆ ಗುರುತು, ಹಿಕ್ಕೆಗಳು, ಕಳೇಬರ, ನೆಲ ಹಾಗೂ ಮರ ಅಗೆದಿರುವ ಕುರಿತು ಮಾಹಿತಿ ದಾಖಲಿಸಲಾಗುತ್ತದೆ’ ಎಂದು ವಲಯ ಅರಣ್ಯಾಧಿಕಾರಿ ಸಂಜೀವಕುಮಾರ ಚವ್ಹಾಣ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>2 ಕಿ.ಮೀ ಉದ್ದದಲ್ಲಿ ಸುಣ್ಣದಿಂದ ರೇಖೆ ಹಾಕಿ ಅದರಲ್ಲಿ ವಿವಿಧ ವಿನ್ಯಾಸದ ವೃತ್ತ ಹಾಕಿ ಅದರಲ್ಲಿ ದೊರೆತ ಹಿಕ್ಕಿಗಳು, ಹುಲ್ಲು, ಸಸ್ಯ ಪ್ರಕಾರಗಳ ಮಾಹಿತಿ ದಾಖಲಿಸಲಾಗುತ್ತಿದೆ ಎಂದರು.</p>.<p>ಉಪ ವಲಯ ಅರಣ್ಯಾಧಿಕಾರಿಗಳಾದ ಸಿದ್ಧಾರೂಡ ಹೊಕ್ಕುಂಡಿ, ಭಾನುಪ್ರತಾಪಸಿಂಗ್, ಗಜಾನಂದ, ನಟರಾಜ ಹಾಗೂ ಅರಣ್ಯ ರಕ್ಷಕರಾದ ಶೇಖ ಅಮೇರ, ಮಾಳಪ್ಪ ಪೂಜಾರಿ, ಹಾಲೇಶ ಹಾಗೂ ಪ್ರಭು ಜಾಧವ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>