‘ಪೀಠದಲ್ಲಿ ಪ್ರತಿ ವರ್ಷ ಕಾಟಾಚಾರಕ್ಕೆ ಅಂಬಿಗರ ಚೌಡಯ್ಯ ಜಯಂತಿ ಮಾಡಿ ಕೈತೊಳೆದುಕೊಳ್ಳಲಾಗುತ್ತಿದೆ. ಸಮಾಜದ ಜನಪ್ರತಿನಿಧಿ, ಸಲಹಾ ಸಮಿತಿ ಪದಾಧಿಕಾರಿಗಳು, ಸಮಾಜದ ಮುಖಂಡರಿಗೆ 16 ವರ್ಷದಲ್ಲಿ ಒಮ್ಮೆಯೂ ಆಹ್ವಾನ ನೀಡಿಲ್ಲ. ಚೌಡಯ್ಯನವರ ಕುರಿತು ವಿಚಾರ ಸಂಕಿರಣ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸದೆ ನಿರ್ಲಕ್ಷ್ಯ ಮಾಡಲಾಗಿದೆ. ಮುಂದೆ ಹೀಗಾಗದಂತೆ ಕ್ರಮ ಕೈಗೊಳ್ಳಬೇಕು. ಸಲಹಾ ಸಮಿತಿ ಸಭೆ ಕರೆದು ಜನಪ್ರತಿನಿಧಿಗಳು, ಸಮಾಜದ ಮುಖಂಡರೊಂದಿಗೆ ಚರ್ಚಿಸಬೇಕು. ಪೀಠದಲ್ಲಿ ಚೌಡಯ್ಯನವರ ಮೂರ್ತಿ ಅನಾವರಣಗೊಳಿಸುವ ನಿರ್ಣಯ ಕೈಗೊಳ್ಳಬೇಕು’ ಎಂದು ಕಮಕನೂರ ಹೇಳಿದರು.