ಮರಣೋತ್ತರ ಪರೀಕ್ಷೆ ನಡೆಸಿ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಿದ ಬಳಿಕ ಶವ ತೆಗೆದುಕೊಂಡು ಪ್ರತಿಭಟನೆ ನಡೆಸುವ ಬದಲು ಸಾರ್ವಜನಿಕವಾಗಿ ನೇಣು ಬಿಗಿದ ಸ್ಥಿತಿಯಲ್ಲಿನ ಶವ ವಿಲೇವಾರಿ ಮಾಡದೇ ನಿರ್ಲಕ್ಷ ಮಾಡಲಾಗುತ್ತಿದೆ ಎನ್ನುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಯಿತು.
ನೇಣು ಬಿಗಿದ ಸ್ಥಿತಿಯಲ್ಲಿರುವ ಶವವನ್ನು ಸರಪಳಿಯಿಂದ ಬಿಚ್ಚಿ ಪ್ರತ್ಯೇಕಿಸದೇ ಅವಮಾನ ಮಾಡಲಾಗುತ್ತಿದೆ. ಶವಕ್ಕೆ ಕನಿಷ್ಠ ಗೌರವ ನೀಡದೆ ಈ ರೀತಿ ಅವಮಾನ ಮಾಡುವುದು ಅತ್ಯಂತ ಬೇಜವಾಬ್ದಾರಿ ಪರಮಾವಧಿಯಾಗಿದ್ದು ಪೊಲೀಸ್ ಇಲಾಖೆ ನಿರ್ಲಕ್ಷ ವಹಿಸಿದೆ ಎಂದು ದಲಿತ ಸೇನಾ ಸಂಘಟನೆ ಜಿಲ್ಲಾ ಅಧ್ಯಕ್ಷ ಶ್ರಾವಣಕುಮಾರ ಮೊಸಲಗಿ ಆಕ್ರೋಶ ವ್ಯಕ್ತಪಡಿಸಿದರು.