ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಾಧಿಕಾರಿ ಮೇಲೆ ಪುರಸಭೆ ಸದಸ್ಯನಿಂದ ಹಲ್ಲೆ!

Last Updated 20 ಜನವರಿ 2021, 2:32 IST
ಅಕ್ಷರ ಗಾತ್ರ

ಕಲಬುರ್ಗಿ: ‘ಚಿಂಚೋಳಿ ಪುರಸಭೆ ಕಚೇರಿಯಲ್ಲಿ ಪುರಸಭೆ ಸದಸ್ಯ ಆನಂದಕುಮಾರ್ ನಾಗೇಂದ್ರಪ್ಪ ಟೈಗರ್ ಹಾಗೂ ಸಹಚರ ಶಶಿಕುಮಾರ್ ಮೇತ್ರಿ ಎಂಬುವವರು ಮಂಗಳವಾರ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ’ ಎಂದುಮುಖ್ಯಾಧಿಕಾರಿ ಅಭಯಕುಮಾರ್‌ ಅವರು ನೀಡಿದ ದೂರಿನ ಮೇರೆಗೆ ಚಿಂಚೋಳಿ ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

‘ಮಂಗಳವಾರ ಪುರಸಭೆ ಕಚೇರಿಗೆ ಬಂದ ಆನಂದಕುಮಾರ್‌ ನಕಲಿ ಬಿಲ್‌ಗಳನ್ನು ತಯಾರಿಸಿ ಚೆಕ್‌ ನೀಡುವಂತೆ ಒತ್ತಾಯಿಸಿದ್ದಾರೆ. ಇದಕ್ಕೆ ಒಪ್ಪದೇ ಇದ್ದಾಗ ನನ್ನ ಕುತ್ತಿಗೆ ಹಿಸುಕಿ ಕೆಳಗೆ ಕೆಡವಿ ಒದ್ದಿದ್ದಾರೆ. ಇದರಿಂದಾಗಿ ಕುತ್ತಿಗೆಗೆ ಗಾಯವಾಗಿದೆ. ಕಚೇರಿಯಲ್ಲಿದ್ದ ಸಿಬ್ಬಂದಿಯಾದ ಅನ್ವರ್, ಶೋಭಾರಾಣಿ, ಮಹ್ಮದ್ ಏಜಾಜ್, ಪೌರಕಾರ್ಮಿಕ ಬಸಪ್ಪ ರಕ್ಷಿಸಿದರು. ನಂತರ ಆನಂದಕುಮಾರ್ ಹಾಗೂ ಶಶಿಕುಮಾರ್ ಅಲ್ಲಿಂದ ಪರಾರಿಯಾಗಿದ್ದಾರೆ’ ಎಂದು ಅಭಯಕುಮಾರ್‌ ದೂರಿನಲ್ಲಿ ತಿಳಿಸಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿದ ಆನಂದಕುಮಾರ್, ‘ಮೂರ್ನಾಲ್ಕು ತಿಂಗಳಿಂದ ಗುತ್ತಿಗೆ ಪೌರಕಾರ್ಮಿಕರಿಗೆ ವೇತನ ಬಿಡುಗಡೆಯಾಗಿರಲಿಲ್ಲ. ಈ ಬಗ್ಗೆ ಮಾಹಿತಿ ಪಡೆಯಲು ಕರೆ ಮಾಡಿದಾಗ ಮುಖ್ಯಾಧಿಕಾರಿಗಳು ಫೋನ್ ತೆಗೆಯಲಿಲ್ಲ. ಕಚೇರಿಗೆ ಹೋಗಿ ಈ ಬಗ್ಗೆ ವಿಚಾರಿಸಿದಾಗ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿದೆವು. ಅವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದೇನೆ. ನಾನು ಬೀದರ್‌ ಆಸ್ಪತ್ರೆಗೆ ದಾಖಲಾಗಿದ್ದು, ಪೊಲೀಸರು ಹೇಳಿಕೆ ಪಡೆದುಕೊಂಡಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT