<p><strong>ಕಲಬುರ್ಗಿ: </strong>ಜಿಲ್ಲೆಯಲ್ಲಿ ಹಲವು ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆತರಕಾರಿ ಮಾರುಕಟ್ಟೆ ಮೇಲೆ ಪರಿಣಾಮ ಬೀರಿದೆ.</p>.<p>ಭಾರಿ ಮಳೆಯಿಂದ ಜಿಲ್ಲೆಯ ವಿವಿಧೆಡೆ ಜಮೀನುಗಳಿಗೆ ನೀರು ನುಗ್ಗಿ ತರಕಾರಿ ಸೇರಿದಂತೆ ಹಲವು ಬೆಳೆಗಳು ಹಾನಿಗೊಳಗಾಗಿವೆ. ಅಲ್ಲದೆ ಹಲವೆಡೆ ರಸ್ತೆಗಳು ಹದಗೆಟ್ಟು, ಸಂಪರ್ಕ ಕಡಿತಗೊಂಡಿದ್ದರಿಂದ ತರಕಾರಿಯನ್ನು ಮಾರುಕಟ್ಟೆಗೆ ಕೊಂಡೊಯ್ಯಲು ರೈತರು ಮತ್ತು ವ್ಯಾಪಾರಿಗಳು ಪರದಾಡುವಂತಾಗಿದೆ.</p>.<p>ಈ ಕಾರಣಗಳಿಂದ ಆವಕ ಕಡಿಮೆಯಾಗಿ ತರಕಾರಿ ಬೆಲೆ ಏರಿಕೆಯಾಗಬಹುದು ಎಂಬ ಲೆಕ್ಕಾ ಚಾರದ ನಡುವೆಯೂ ಟೊಮೆಟೊ, ಈರುಳ್ಳಿ, ಮೆಣಸಿನಕಾಯಿ ಸೇರಿದಂತೆ ತರಕಾರಿಗಳ ಬೆಲೆ ಇಳಿಕೆಯಾಗಿದೆ.</p>.<p>ಕಳೆದ ವಾರ ಕೆಜಿಗೆ ₹60ರಂತೆ ಮಾರಾಟವಾಗುತ್ತಿದ್ದ ಟೊಮೆಟೊ, ಈ ವಾರ ₹40ಕ್ಕೆ ಮಾರಾಟವಾಗುತ್ತಿದ್ದು ಗ್ರಾಹಕರಿಗೆ ‘ಸಿಹಿ’ಯಾಗಿ ಪರಿಣಮಿಸಿದೆ. ₹40 ಕೆ.ಜಿ ಇದ್ದ ಈರುಳ್ಳಿ ₹30ಕ್ಕೆ ಇಳಿದಿದ್ದರೆ, ಮೆಣಸಿನಕಾಯಿ ₹60ರಿಂದ ₹40ಕ್ಕೆ ಇಳಿಕೆಯಾಗಿದೆ.</p>.<p>ಕಳೆದ ವಾರ ಶತಕದ ಗಡಿ ದಾಟಿದ್ದ ಬೀನ್ಸ್ ಬೆಲೆ ಈ ವಾರ ಅಲ್ಪ ಇಳಿಕೆಯಾಗಿದ್ದು, ಕೆ.ಜಿಗೆ ₹100ರಂತೆ ಮಾರಾಟವಾಗುತ್ತಿದೆ. ಇನ್ನುಳಿದಂತೆಆಲೂಗಡ್ಡೆ, ಬೆಂಡೆಕಾಯಿ, ಬದನೆಕಾಯಿ, ಹೂಕೋಸು, ಸೌತೆಕಾಯಿ ಸೇರಿದಂತೆ ಹಲವು ತರಕಾರಿ ಬೆಲೆಗಳು ಯಥಾಸ್ಥಿತಿ ಕಾಪಾಡಿಕೊಂಡಿವೆ.</p>.<p class="Subhead"><strong>ಸೊಪ್ಪು ಸ್ಥಿರ:</strong> ಸೊಪ್ಪುಗಳು ಬೆಲೆಯಲ್ಲಿ ಸ್ಥಿರತೆ ಕಾಪಾಡಿಕೊಂಡಿದ್ದು, ಪಾಲಕ್ ₹20ಕ್ಕೆ 3, ಸಬ್ಬಸಗಿ 4 ಕಟ್ಟುಗಳಂತೆ ಮಾರಾಟವಾಗುತ್ತಿವೆ. ಇನ್ನುಳಿದಂತೆ ಕೊತ್ತಂಬರಿ, ಪುದೀನಾ, ಮೆಂತ್ಯೆ ₹20ಕ್ಕೆ ತಲಾ ಒಂದು ಕಟ್ಟು ಸಿಗುತ್ತಿದೆ. ಕರಿಬೇವಿನ ಒಂದು ಕಟ್ಟು ಬೆಲೆಗೆ ₹10 ಇದೆ.</p>.<p>‘ಕಣ್ಣಿ ಮತ್ತು ತಾಜಸುಲ್ತಾನಪುರ ಮಾರುಕಟ್ಟೆಗಳಿಂದ ತರಕಾರಿ ತಂದು ಮಾರಾಟ ಮಾಡುತ್ತಿದ್ದೇವೆ.ಹೊರ ಜಿಲ್ಲೆಗಳಿಂದ ಬರುತ್ತಿರುವ ತರಕಾರಿ ಆವಕ ಕಡಿಮೆಯಾಗಿದ್ದರಿಂದ ಕೆಲವು ತರಕಾರಿಗಳ ಬೆಲೆ ಹೆಚ್ಚಾಗಿದೆ’ ಎಂದು ತರಕಾರಿ ವ್ಯಾಪಾರಿ ಅಹ್ಮದ್ ತಿಳಿಸಿದರು.</p>.<p>‘ಹಲವು ದಿನಗಳಿಂದ ದಿನವಿಡೀ ಮಳೆ ಸುರಿಯುತ್ತಿರುವುದರಿಂದ ಜನರು ಹೊರಗಡೆ ಬರುತ್ತಿಲ್ಲ. ಇದರಿಂದಾಗಿ ವ್ಯಾಪಾರವೂ ಕಡಿಮೆಯಾಗಿದೆ. ಅಲ್ಲದೆ ಮಾರಾಟವಾಗದ ತರಕಾರಿಯು ಮನೆಯಲ್ಲಿ ಹಾಳಾಗುವ ಭೀತಿ ಉಂಟಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಜಿಲ್ಲೆಯಲ್ಲಿ ಹಲವು ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆತರಕಾರಿ ಮಾರುಕಟ್ಟೆ ಮೇಲೆ ಪರಿಣಾಮ ಬೀರಿದೆ.</p>.<p>ಭಾರಿ ಮಳೆಯಿಂದ ಜಿಲ್ಲೆಯ ವಿವಿಧೆಡೆ ಜಮೀನುಗಳಿಗೆ ನೀರು ನುಗ್ಗಿ ತರಕಾರಿ ಸೇರಿದಂತೆ ಹಲವು ಬೆಳೆಗಳು ಹಾನಿಗೊಳಗಾಗಿವೆ. ಅಲ್ಲದೆ ಹಲವೆಡೆ ರಸ್ತೆಗಳು ಹದಗೆಟ್ಟು, ಸಂಪರ್ಕ ಕಡಿತಗೊಂಡಿದ್ದರಿಂದ ತರಕಾರಿಯನ್ನು ಮಾರುಕಟ್ಟೆಗೆ ಕೊಂಡೊಯ್ಯಲು ರೈತರು ಮತ್ತು ವ್ಯಾಪಾರಿಗಳು ಪರದಾಡುವಂತಾಗಿದೆ.</p>.<p>ಈ ಕಾರಣಗಳಿಂದ ಆವಕ ಕಡಿಮೆಯಾಗಿ ತರಕಾರಿ ಬೆಲೆ ಏರಿಕೆಯಾಗಬಹುದು ಎಂಬ ಲೆಕ್ಕಾ ಚಾರದ ನಡುವೆಯೂ ಟೊಮೆಟೊ, ಈರುಳ್ಳಿ, ಮೆಣಸಿನಕಾಯಿ ಸೇರಿದಂತೆ ತರಕಾರಿಗಳ ಬೆಲೆ ಇಳಿಕೆಯಾಗಿದೆ.</p>.<p>ಕಳೆದ ವಾರ ಕೆಜಿಗೆ ₹60ರಂತೆ ಮಾರಾಟವಾಗುತ್ತಿದ್ದ ಟೊಮೆಟೊ, ಈ ವಾರ ₹40ಕ್ಕೆ ಮಾರಾಟವಾಗುತ್ತಿದ್ದು ಗ್ರಾಹಕರಿಗೆ ‘ಸಿಹಿ’ಯಾಗಿ ಪರಿಣಮಿಸಿದೆ. ₹40 ಕೆ.ಜಿ ಇದ್ದ ಈರುಳ್ಳಿ ₹30ಕ್ಕೆ ಇಳಿದಿದ್ದರೆ, ಮೆಣಸಿನಕಾಯಿ ₹60ರಿಂದ ₹40ಕ್ಕೆ ಇಳಿಕೆಯಾಗಿದೆ.</p>.<p>ಕಳೆದ ವಾರ ಶತಕದ ಗಡಿ ದಾಟಿದ್ದ ಬೀನ್ಸ್ ಬೆಲೆ ಈ ವಾರ ಅಲ್ಪ ಇಳಿಕೆಯಾಗಿದ್ದು, ಕೆ.ಜಿಗೆ ₹100ರಂತೆ ಮಾರಾಟವಾಗುತ್ತಿದೆ. ಇನ್ನುಳಿದಂತೆಆಲೂಗಡ್ಡೆ, ಬೆಂಡೆಕಾಯಿ, ಬದನೆಕಾಯಿ, ಹೂಕೋಸು, ಸೌತೆಕಾಯಿ ಸೇರಿದಂತೆ ಹಲವು ತರಕಾರಿ ಬೆಲೆಗಳು ಯಥಾಸ್ಥಿತಿ ಕಾಪಾಡಿಕೊಂಡಿವೆ.</p>.<p class="Subhead"><strong>ಸೊಪ್ಪು ಸ್ಥಿರ:</strong> ಸೊಪ್ಪುಗಳು ಬೆಲೆಯಲ್ಲಿ ಸ್ಥಿರತೆ ಕಾಪಾಡಿಕೊಂಡಿದ್ದು, ಪಾಲಕ್ ₹20ಕ್ಕೆ 3, ಸಬ್ಬಸಗಿ 4 ಕಟ್ಟುಗಳಂತೆ ಮಾರಾಟವಾಗುತ್ತಿವೆ. ಇನ್ನುಳಿದಂತೆ ಕೊತ್ತಂಬರಿ, ಪುದೀನಾ, ಮೆಂತ್ಯೆ ₹20ಕ್ಕೆ ತಲಾ ಒಂದು ಕಟ್ಟು ಸಿಗುತ್ತಿದೆ. ಕರಿಬೇವಿನ ಒಂದು ಕಟ್ಟು ಬೆಲೆಗೆ ₹10 ಇದೆ.</p>.<p>‘ಕಣ್ಣಿ ಮತ್ತು ತಾಜಸುಲ್ತಾನಪುರ ಮಾರುಕಟ್ಟೆಗಳಿಂದ ತರಕಾರಿ ತಂದು ಮಾರಾಟ ಮಾಡುತ್ತಿದ್ದೇವೆ.ಹೊರ ಜಿಲ್ಲೆಗಳಿಂದ ಬರುತ್ತಿರುವ ತರಕಾರಿ ಆವಕ ಕಡಿಮೆಯಾಗಿದ್ದರಿಂದ ಕೆಲವು ತರಕಾರಿಗಳ ಬೆಲೆ ಹೆಚ್ಚಾಗಿದೆ’ ಎಂದು ತರಕಾರಿ ವ್ಯಾಪಾರಿ ಅಹ್ಮದ್ ತಿಳಿಸಿದರು.</p>.<p>‘ಹಲವು ದಿನಗಳಿಂದ ದಿನವಿಡೀ ಮಳೆ ಸುರಿಯುತ್ತಿರುವುದರಿಂದ ಜನರು ಹೊರಗಡೆ ಬರುತ್ತಿಲ್ಲ. ಇದರಿಂದಾಗಿ ವ್ಯಾಪಾರವೂ ಕಡಿಮೆಯಾಗಿದೆ. ಅಲ್ಲದೆ ಮಾರಾಟವಾಗದ ತರಕಾರಿಯು ಮನೆಯಲ್ಲಿ ಹಾಳಾಗುವ ಭೀತಿ ಉಂಟಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>