2019ರಲ್ಲಿ ಮರಳು ಎತ್ತಲು ಗುತ್ತಿಗೆ ಹಿಡಿದಿದ್ದ ಗುತ್ತಿಗೆದಾರರು ಸರ್ಕಾರ ಅನುಮತಿ ನೀಡಿದ್ದಕ್ಕಿಂತ ಹೆಚ್ಚಿನ ಪ್ರಮಾಣದ ಮರಳನ್ನು ಭೀಮಾ ನದಿಯಿಂದ ಸಂಗ್ರಹಿಸಿದ್ದರು. ಹೀಗಾಗಿ, ಜಿಲ್ಲಾಡಳಿತ ಗುತ್ತಿಗೆದಾರರಿಗೆ ₹ 80 ಲಕ್ಷ ದಂಡ ವಿಧಿಸಿತ್ತು. ಈ ಆದೇಶ ಪ್ರಶ್ನಿಸಿ ಗುತ್ತಿಗೆದಾರ ನ್ಯಾಯಾಲಯಕ್ಕೆ ಹೋಗಿದ್ದರು. ಜಿಲ್ಲಾಡಳಿತದ ತೀರ್ಮಾನವನ್ನು ನ್ಯಾಯಾಲಯ ಎತ್ತಿ ಹಿಡಿದಿತ್ತು. ಆದರೆ, ಗುತ್ತಿಗೆದಾರ ದಂಡದ ಮೊತ್ತವನ್ನು ಪಾವತಿಸಿರಲಿಲ್ಲ. ಹೀಗಾಗಿ, ಅದಾಗಲೇ ಸಂಗ್ರಹಿಸಿದ್ದ ಮರಳನ್ನು ಜಿಲ್ಲಾಡಳಿತ ಜಪ್ತಿ ಮಾಡಿ ಲೋಕೋಪಯೋಗಿ ಇಲಾಖೆಯ ವಶಕ್ಕೆ ನೀಡಿತ್ತು.